ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಇಂದು ನಿನ್ನೆಗಿಂತಲೂ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಇಂದು 3,604 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 89 ಜನ ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 7,699 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ 28,34,630 ಸೋಂಕಿನ ಪ್ರಕರಣಗಳು ವರದಿಯಾಗಿವೆ. ಒಟ್ಟು 34,743 ಜನ ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲಿ 788 ಜನಕ್ಕೆ ಸೋಂಕು ತಗುಲಿದ್ದು, 11 ಜನ ಸಾವನ್ನಪ್ಪಿದ್ದಾರೆ. ಸಿಲಿಕಾನ್ ಸಿ ಟಿಯಲ್ಲಿ 63,473 ಸಕ್ರಿಯ ಪ್ರಕರಣಗಳಿವೆ.
ಇಂದು ರಾಜ್ಯದ ಬಾಗಲಕೋಟೆ 7, ಬಳ್ಳಾರಿ 26, ಬೆಳಗಾವಿ 143, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 788, ಬೀದರ್ 8, ಚಾಮರಾಜನಗರ 54, ಚಿಕ್ಕಬಳ್ಳಾಪುರ 40, ಚಿಕ್ಕಮಗಳೂರು 126, ಚಿತ್ರದುರ್ಗ 22, ದಕ್ಷಿಣ ಕನ್ನಡ 454, ದಾವಣಗೆರೆ 118, ಧಾರವಾಡ 46,
ಗದಗ 18, ಹಾಸನ 322, ಹಾವೇರಿ 13, ಕಲಬುರಗಿ 36, ಕೊಡಗು 115, ಕೋಲಾರ 101, ಕೊಪ್ಪಳ 9, ಮಂಡ್ಯ 109, ಮೈಸೂರು 478, ರಾಯಚೂರು 19, ರಾಮನಗರ 15, ಶಿವಮೊಗ್ಗ 177, ತುಮಕೂರು 116, ಉಡುಪಿ 97, ಉತ್ತರ ಕನ್ನಡ 57, ವಿಜಯಪುರ 9 ಮತ್ತು ಯಾದಗಿರಿಯಲ್ಲಿ 4ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.