ರಾಜ್ಯದಲ್ಲಿ 5 ಸಾವಿರದ ಗಡಿಯ ಒಳಗೆ ಬಂದ ಸೋಂಕು!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಅನ್ ಲಾಕ್ ಮಾಡಲು ರಾಜ್ಯ ಸರ್ಕಾರ ಪ್ರಾರಂಭಿಸಿದೆ. ಇಂದು ರಾಜ್ಯದಲ್ಲಿ 4,517 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಶೇಕಡಾವಾರು ಪ್ರಮಾಣ ಇಳಿಕೆಯಾಗಿದ್ದು, ಇಂದು ಶೇ. 2.58ರಷ್ಟು ದಾಖಲಾಗಿದೆ. ಅಲ್ಲದೇ, ಇಂದು 120 ಜನ ಸಾವನ್ನಪ್ಪಿದ್ದಾರೆ.

ಇಂದು ರಾಜ್ಯದಲ್ಲಿ 8,456 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೂ ರಾಜ್ಯದಲ್ಲಿ 33,883 ಸೋಂಕಿತರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಶೇಕಡಾವಾರು ಪ್ರಮಾಣ ಸಹ ಇಳಿಕೆಯಾಗಿದೆ.

ರಾಜಧಾನಿಯಲ್ಲಿ ಸಾವಿರಕ್ಕೂ ಕಡಿಮೆ ಕೊರೊನಾ ಪ್ರಕರಣಗಳ ವರದಿಯಾಗಿವೆ. ನಗರದಲ್ಲಿ ಇಂದು 933 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೇವಲ 12 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸದ್ಯ 71,282 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಇಳಿದಿದೆ. ಬೆಂಗಳೂರು ನಗರದ ಸೇರಿದಂತೆ ಮೈಸೂರು ಮತ್ತು ದಕ್ಷಿಣ ಕನ್ನಡದಲ್ಲಿ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಇಂದು ರಾಜ್ಯದ ಬಾಗಲಕೋಟೆ 10, ಬಳ್ಳಾರಿ 67, ಬೆಳಗಾವಿ 201, ಬೆಂಗಳೂರು ಗ್ರಾಮಾಂತರ 111, ಬೆಂಗಳೂರು ನಗರ 933, ಬೀದರ್ 6, ಚಾಮರಾಜನಗರ 61, ಚಿಕ್ಕಬಳ್ಳಾಪುರ 123, ಚಿಕ್ಕಮಗಳೂರು 183, ಚಿತ್ರದುರ್ಗ 74, ದಕ್ಷಿಣ ಕನ್ನಡ 525, ದಾವಣಗೆರೆ 136, ಧಾರವಾಡ 77,

ಗದಗ 28, ಹಾಸನ 346, ಹಾವೇರಿ 24, ಕಲಬುರಗಿ 9, ಕೊಡಗು 137, ಕೋಲಾರ 77, ಕೊಪ್ಪಳ 61, ಮಂಡ್ಯ 131, ಮೈಸೂರು 545, ರಾಯಚೂರು 19, ರಾಮನಗರ 12, ಶಿವಮೊಗ್ಗ 141, ತುಮಕೂರು 144, ಉಡುಪಿ 167, ಉತ್ತರ ಕನ್ನಡ 146, ವಿಜಯಪುರ 7 ಮತ್ತು ಯಾದಗಿರಿಯಲ್ಲಿ 16 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.


Spread the love

LEAVE A REPLY

Please enter your comment!
Please enter your name here