ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ಅಂಡ್ ಟೀಂ: ರಾಜಕಾರಣದಲ್ಲಿ ಮತ್ತೆ ಉಂಟಾಗುತ್ತಾ ಸಂಚಲನ?

0
Spread the love

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು: ಮೈತ್ರಿ ಸರ್ಕಾರವನ್ನು ಕೆಡವಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಕಾರಣವಾಗಿದ್ದ ರಮೇಶ್ ಜಾರಕೀಹೊಳಿ ಮತ್ತೆ ಅಂತಹುದೇ ಪ್ರಯತ್ನಕ್ಕೆ ಕೈ ಹಾಕಿದ್ದಾರಾ ಎನ್ನುವ ಅನುಮಾನಗಳು ಆರಂಭವಾಗಿದೆ.

Advertisement

ಹೌದು ಕಳೆದ ರಾತ್ರಿಯಿಂದ ಜಿಲ್ಲೆಯ ಸರಾಯ್ ರೆಸಾರ್ಟ್ ನಲ್ಲಿ ರಮೇಶ್ ಜಾರಕೀಹೊಳಿ ತಮ್ಮ ಸಂಪುಟ ಸಹೋದ್ಯೋಗಿ, ಸಿ.ಪಿ ಯೋಗೇಶ್ವರ್, ಶಾಸಕರಾದ ಎಂಪಿ ಕುಮಾರಸ್ವಾಮಿ, ಗೋಪಾಲಯ್ಯ ಸೇರಿದಂತೆ ಹಲವರೊಂದಿಗೆ ರಹಸ್ಯ ಸಭೆ ನಡೆಸಿದರು.

ಕಾಫಿನಾಡಿನಲ್ಲಿ ನಡೆದ ಈ ರಹಸ್ಯ ಸಭೆಯಲ್ಲಿ ಏನೇನು ವಿಚಾರಗಳು ಚರ್ಚೆಯಾಗಿವೆ ಎನ್ನುವುದೀಗ ಪ್ರಶ್ನೆಯಾಗುಳಿದಿದೆ. ಸಿ ಪಿ ಯೋಗೇಶ್ವರ್ ಬಹಿರಂಗವಾಗಿ ಏನೂ ಹೇಳಿಲ್ಲವೆಂದರೂ ಅಸಮಾಧಾನ ಹೊಂದಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ರಮೇಶ್ ಜಾರಕೀಹೊಳಿ ಎತ್ತಿನಹೊಳೆ ಯೋಜನೆ ಕುರಿತು ಮಾತನಾಡಲಾಗಿದೆ. ಅದು ಬಿಟ್ಟು ಬೇರ್ಯಾವಾ ವಿಚಾರಗಳೂ ಚರ್ಚೆಯಾಗಿಲ್ಲ. ಮಾಧ್ಯಮದವರು ಕನ್ಫ್ಯೂಸ್ ಮಾಡಬೇಡಿ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here