ರೇಖಾ ಕದಿರೇಶ್ ಹತ್ಯೆ ಪ್ರಕರಣ – ಆರೋಪಿಗಳು ಅಂದರ್!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾಗಿರುವ ಪೀಟರ್ ಮತ್ತು ಸೂರ್ಯನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿಯ ಕಾಮಾಕ್ಷಿಪಾಳ್ಯದ ಸುಮನಹಳ್ಳಿಯ ಶನಿ ಮಹಾತ್ಮ ದೇವಸ್ಥಾನದ ಬಳಿ ಆರೋಪಿಗಳು ಪೊಲೀಸರಿಗೆ ಸಿಕ್ಕಿದ್ದಾರೆ. ನಿನ್ನೆ ಬೆಳಗ್ಗೆ ಮಾಜಿ ಕಾರ್ಪೊರೇಟರ್ ರೇಖಾ ಹತ್ಯೆ ನಡೆದಿದ್ದು, ಕೇವಲ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವ ಮೂಲಕ ಪೊಲೀಸರು ತಮ್ಮ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಿಗೆ ಆರಂಭದಲ್ಲಿ ಪೊಲೀಸರು ಶರಣಾಗುವಂತೆ ಹೇಳಿದರೂ ಕೇಳಲಿಲ್ಲ. ಆಗ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಅನಿವಾರ್ಯವಾಗಿ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ. ಇನ್ಸ್ ಪೆಕ್ಟರ್ ಗಳಾದ ಶಿವಾನಂದ್ ಮತ್ತು ಚಿದಾನಂದ್ ರವರು ಫೈರಿಂಗ್ ಮಾಡಿ ಬಂಧಿಸಿದ್ದಾರೆ.

ಸಿಎಂ ಯಡಿಯೂರಪ್ಪ, ಆರೋಪಿಗಳನ್ನು 24 ಗಂಟೆಗಳಲ್ಲಿಯೇ ಬಂಧಿಸಲಾಗುವುದು ಎಂದು ಹೇಳಿದ್ದರು. ಗೃಹ ಸಚಿವರು ಕೂಡ ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು. ಸದ್ಯ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ, ಆರೋಪಿಗಳು ಮೊಬೈಲ್ ನಲ್ಲಿ ಕೊಲೆಯ ದೃಶ್ಯ ಸೆರೆ ಹಿಡಿದಿದ್ದರು ಎಂದು ಕೂಡ ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here