ರೈತರಿಗೆ ಗೊಬ್ಬರ, ಬೀಜ ಉಚಿತವಾಗಿ ನೀಡಲು ಆಗ್ರಹ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಕೊರೊನಾ ಸೋಂಕಿನಿಂದ ಅನೇಕ ವರ್ಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ರೈತಾಪಿ ವರ್ಗದ ಜನರ ಸಂಕಷ್ಟ ಹೇಳತೀರದು. ಹೀಗಾಗಿ ಸರಕಾರ ಮುಂಗಾರು ಬಿತ್ತನೆಗೆ ರೈತ ಸಮುದಾಯಕ್ಕೆ ಬೀಜ ಹಾಗೂ ಗೊಬ್ಬರ‌ ಉಚಿತವಾಗಿ ನೀಡಬೇಕು ಎಂದು ಗದಗ ಜಿಲ್ಲಾ ಕಾಂಗ್ರೆಸ್ ನ ಅಲ್ಪಸಂಖ್ಯಾತರ ಘಟಕದ ಸಂಯೋಜಕ ರಾಜು ಪೆಂಡಾರ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ಲಾಕ್ ಡೌನ್ ನಿಂದ ರೈತರು ತುಂಬಾ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೈಯಲ್ಲಿ ಹಣವಿಲ್ದೇ ಪರಿತಪಿಸುವಂತಹ ಸಮಯದಲ್ಲಿ ಸರಕಾರ ಅವರ ಕೈ ಹಿಡಿಯಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಕೃಷಿ ಸಚಿವರು ಕೂಡಲೇ ಈ ಬಗ್ಗೆ ಗಮನ ಹರಿಸಿ ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಪೆಂಡಾರ ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here