HomeCrime Newsರೋಣ ತಾಲ್ಲೂಕಿನಲ್ಲಿ ಮತ್ತೊಂದು ಅಮಾನವೀಯ ಘಟನೆ; ಬಟ್ಟೆ ‌ಬಿಚ್ಚಿಸಿ, ಸೆಗಣಿ ತಿನಿಸಲು ಮುಂದಾದ ಆರೋಪಿಗಳು!

ರೋಣ ತಾಲ್ಲೂಕಿನಲ್ಲಿ ಮತ್ತೊಂದು ಅಮಾನವೀಯ ಘಟನೆ; ಬಟ್ಟೆ ‌ಬಿಚ್ಚಿಸಿ, ಸೆಗಣಿ ತಿನಿಸಲು ಮುಂದಾದ ಆರೋಪಿಗಳು!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ:

ರೋಣ ತಾಲ್ಲೂಕಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ನಿಂತಿದ್ದ
ಪರಿಶಿಷ್ಟ ಜಾತಿಯ‌ ಮೂರು ಜನರಿಗೆ ಏಳು ಜನರ ಗುಂಪೊಂದು ಅಮಾನವೀಯವಾಗಿ ನಡೆದುಕೊಂಡಿದೆ.

ಮೆಣಸಗಿ ಗ್ರಾಮದ ಕಾಂಟ್ರಾಕ್ಟರ್ ಪುಂಡಲೀಕ ಬಸಪ್ಪ ಮಾದರ ಎಂಬಾತ ಗೆಳೆಯರಾದ ಹನಮಂತ ದ್ಯಾಮಪ್ಪ ಮಾದರ ಹಾಗೂ ಗಣೇಶ್ ದುರಗಪ್ಪ ದೇವರಮನಿ ಜೊತೆಗೆ ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತುಕೊಂಡಾಗ ಏಕಾಏಕಿ ಎಂಟುತ್ತು ಜನರ ಗುಂಪೊಂದು ಬಂದು ಅವಾಚ್ಯ ಶಬ್ದಗಳಿಂದ ಬೈದಾಡಿ ನಿಂದಿಸಿ, ಊರಾಗ ರೌಡಿಸಂ ಮಾಡಾಕತ್ತಿರೇನ ಲೇ …..ಮಕ್ಕಳ ಅಂತಾ ಬೈದಾಡುತ್ತಾ ಫಿರ್ಯಾದಿ ಗುತ್ತಿಗೆದಾರ ಪುಂಡಲೀಕ ಮಾದರ ಎಂಬಾತನ ಎದೆ ಮೇಲಿನ ಅಂಗಿ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಆರೋಪಿತನಾದ ರಾಜು ಬದಾಮಿ ಎಂಬಾತ ಸೆಗಣಿ ಹಿಡಿದುಕೊಂಡು ಬಂದು ಆರೋಪಿ ಪುಂಡಲೀಕನ ಬಾಯಿಯಲ್ಲಿ ಇಡಲು ಒತ್ತಾಯ ಮಾಡಿದ್ದು, ಹಾಗೂ ಗೆಳೆಯರಾದ ಹನಮಂತ ದ್ಯಾಮಪ್ಪ ಮಾದರ, ಗಣೇಶ್ ದುರಗಪ್ಪ ದೇವರಮನಿ ಎಂಬ ಮೂರು ಜನರ ಅಂಗಿ ಬಿಚ್ಚಿಸಿ ಅವಮಾನ ಮಾಡಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲದೆ ಜೀವ ಸಹಿತ ಸುಟ್ಟ ಬಿಡೋಣ ಎಂದಿದ್ದಲ್ಲದೇ ಲೈಟಿನ ಕಂಬಕ್ಕೆ ಕಟ್ಟಲು ಆರೋಪಿಗಳು ಮುಂದಾಗಿದ್ದರು ಎಂದು ಹೇಳಲಾಗುತ್ತದೆ. ನಂತರ ಊರ ಬಿಟ್ಟು ಹೋಗುವಂತೆ ಜೀವ ಬೆದರಿಕೆ ಕೂಡ ಹಾಕಲಾಗಿದೆ ಅಂತೆ.

ಇದನ್ನೂ ಓದಿ ರೋಣದಲ್ಲಿ ಅಮಾನವೀಯ ಘಟನೆ; ಮೇಲ್ಜಾತಿ ವ್ಯಕ್ತಿಯನ್ನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಹಿಳೆಗೆ ಅರೆಬತ್ತಲೆ ಶಿಕ್ಷೆ!

ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ರಾಜು ಸಿದ್ದಪ್ಪ ಬದಾಮಿ ಅಲಿಯಾಸ್ ಗಾಣಿಗೇರ, ಬಸವರಾಜ ಬದಾಮಿ, ಪ್ರವೀಣ್ ಮಲ್ಲಿಕಾರ್ಜುನ ಗುರಮ್ಮನವರ್, ಈರಪ್ಪ ಪತಂಗ, ಪ್ರಕಾಶ್ ಗಾಣಿಗೇರ, ಚಂದ್ರು ಮುದ್ದಪ್ಪ ಬದಾಮಿ ಎಂಬವರ ಮೇಲೆ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ. ಈ ಇಡೀ ಪ್ರಕರಣ ನಡೆದಿದ್ದು ಯಾವ ಕಾರಣಕ್ಕಾಗಿ ಎಂಬುದು ಗೊತ್ತಾಗಿಲ್ಲ. ಕಳೆದ ವರ್ಷ ಜುಲೈ ತಿಂಗಳಲ್ಲಿ ರೋಣ ತಾಲ್ಲೂಕಿನ ಅಸೂಟಿ‌ ಗ್ರಾಮದಲ್ಲಿ ಮಹಿಳೆಗೆ ಅರೆಬತ್ತಲೆ ಶಿಕ್ಷೆ ನೀಡಿದ ಪ್ರಕರಣ ಬೆಳಕಿಗೆ ಬಂದಿತ್ತು.

ಪ್ರತಿ ದೂರು ದಾಖಲು;

ಫಿರ್ಯಾದಿ ನಿಂಗಪ್ಪ ಶಿವಲಿಂಗಪ್ಪ ಬದಾಮಿ ಮನೆಯಲ್ಲಿ ಇದ್ದಾಗ ಆರೋಪಿಗಳಾದ ಬಸಪ್ಪ ಭರಮಪ್ಪ ಮಾದರ, ಪುಂಡಲೀಕ ಬಸಪ್ಪ ಮಾದರ, ಶೇಕಪ್ಪ ಭರಮಪ್ಪ ಮಾದರ, ಹನಮಪ್ಪ ಶೇಖಪ್ಪ ಮಾದರ, ಭರಮಪ್ಪ ಶೇಖಪ್ಪ ಮಾದರ, ಗಣೇಶ್ ದುರಗಪ್ಪ ದೇವರಮನಿ ಎಂಬುವವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಎಸ್ ಸಿ ಕೇಸ್ ಹಾಕಿಸಿ ಎಲ್ಲರನ್ನೂ ಒಳಗ ಹಾಕಸ್ತೀವಿ ಅಂತ ಬೆದರಿಕೆ ಹಾಕಿದ್ದಲ್ಲದೆ ಕಲ್ಲು ಮತ್ತು ಬಡಿಗೆಗಳಿಂದ ಹೊಡೆಯಲು ಹೋದಾಗ, ಪುಂಡಲೀಕ ಮಾದರ ಎಂಬಾತ ಫಿರ್ಯಾದಿ ನಿಂಗಪ್ಪನಿಗೆ ಕೈಯಿಂದ ಗುದ್ದಿ, ನೂಕಾಡಿದಾಗ‌ ಬಿದ್ದು ಒಳಪೆಟ್ಟು ಆಗಿದ್ದು, ಇದೇ ಸಂದರ್ಭದಲ್ಲಿ ಶರಣಬಸಪ್ಪ ಬದಾಮಿ ಎಂಬುವರು ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ಕಾಣಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!