ವಿಜಯಸಾಕ್ಷಿ ಸುದ್ದಿ, ಮೈಸೂರು
Advertisement
ರಾಜ್ಯದಲ್ಲಿ ಲಾಕ್ಡೌನ್ ತೆರವುಗೊಳಿಸಿದ ನಂತರ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ಕಾನೂನು ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಾಕ್ಡೌನ್ ಸಮಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆ ಇತ್ತು. ಆದರೆ ಲಾಕ್ಡೌನ್ ತೆರವು ಮಾಡಿದ ನಂತರ ಸರಗಳ್ಳತನ, ದರೋಡೆಯಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ ಎಂದರು.
ರಾಜ್ಯದಲ್ಲಿ 50 ಕೋಟಿ ರೂ. ಮೌಲ್ಯದಷ್ಟು ಡ್ರಗ್ಸ್ ನಾಶ ಮಾಡಿದ್ದೇವೆ. 5 ವರ್ಷದಷ್ಟು ಡ್ರಗ್ಸ್ ಕೇವಲ ಒಂದೇ ವರ್ಷದಲ್ಲಿ ಸಂಗ್ರಹವಾಗಿದೆ. ಸಿಂಥೆಟಿಕ್ ಡ್ರಗ್ಸ್ ತಡೆಗಟ್ಟುವ ಕೆಲಸವಾಗುತ್ತಿದೆ. ಡ್ರಗ್ಸ್ ವಿದೇಶದಿಂದ ಡಾರ್ಕ್ ವೆಬ್ನಲ್ಲಿ ಬರುತ್ತಿದೆ. ಇದನ್ನು ಕರ್ನಾಟಕದ ಪೊಲೀಸರು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದಾರೆ ಎಂದು ಪೊಲೀಸರ ಕಾರ್ಯಕ್ಕೆ ಬಸವರಾಜ್ ಬೊಮ್ಮಾಯಿ ಶ್ಲಾಘನೆ ವ್ಯಕ್ತಪಡಿಸಿದರು.