ವಿಜಯಸಾಕ್ಷಿ ಸುದ್ದಿ, ಕಲಬುರಗಿ
ಬಹಳಷ್ಟು ಜನ ಲಿಂಗಾಯತ ಶಾಸಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಗೆ ಬರಲು ಸಿದ್ಧರಾಗಿದ್ದಾರೆ. ಎಂ.ಬಿ. ಪಾಟೀಲ, ಈಶ್ವರ್ ಖಂಡ್ರೆ ಸೇರಿದಂತೆ ಅನೇಕರು ಆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಹೇಳಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಲಿಂಗಾಯತ ಸಮುದಾಯವನ್ನು ತಮ್ಮ ಆಸ್ತಿ ಎಂದು ತಿಳಿದುಕೊಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಬಹಳಷ್ಟು ಜನ ಲಿಂಗಾಯತರಿದ್ದಾರೆ ಎಂದು ಹೇಳಿದರು.
ಸಿಎಂ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಮ್ಯೂಜಿಕಲ್ ಚೇರ್ ಆಟ ನಡೆದಿಲ್ಲಾ, ಅದು ಬಿಜೆಪಿಯಲ್ಲಿ ನಡೆದಿದೆ ಎಂದರು.
ಸದ್ಯ ಚುನಾವಣೆ ಹತ್ತಿರವಿಲ್ಲ. ಕೊರೊನಾದಿಂದ ರಾಜಕೀಯ ಸಭೆಗಳಿಗೆ ಅವಕಾಶವಿಲ್ಲ. ಹೀಗಾಗಿ ಜನರ ಬಳಿ ಹೋಗಿ ಅವರ ಸಮಸ್ಯೆ ಕೇಳುತ್ತಿದ್ದೇನೆ. ಸರ್ಕಾರದ ಕೊವಿಡ್ ಪರಿಹಾರ ಜನರಿಗೆ ಸಿಕ್ಕಿಲ್ಲ ಎಂದು ಹೇಳಿದರು.



