ವಿಜಯಸಾಕ್ಷಿ ಸುದ್ದಿ, ಮೈಸೂರು
Advertisement
ಕೊರೊನಾ ಮಹಾಮಾರಿಗೆ ವರುಣ ಕ್ಷೇತ್ರದಲ್ಲಿ 120ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಸಹಾಯಹಸ್ತ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಗ್ರಾ.ಪಂ ಮಟ್ಟದಿಂದಲೂ ಮಾಹಿತಿ ಕಲೆ ಹಾಕುತ್ತಿದ್ದೇನೆ. ಸದ್ಯದ ಮಾಹಿತಿ ಪ್ರಕಾರ ಕೊರೊನಾ ಮೊದಲ ಹಾಗೂ ಎರಡನೇ ಅಲೆಯಲ್ಲಿ 120ಕ್ಕೂ ಹೆಚ್ಚು ಮಂದಿ ಮೃತರಾಗಿದ್ದಾರೆ ಎಂದು ಹೇಳಿದರು.
ವರುಣ ಕ್ಷೇತ್ರದಲ್ಲಿ ಮೈಸೂರು, ಟಿ. ನರಸೀಪುರ, ನಂಜನಗೂಡು ತಾಲೂಕುಗಳು ಒಳಗೊಂಡಿದ್ದು,ಶಾಸಕ ಯತೀಂದ್ರ ಅವರು, ಕೊರೊನಾಗೆ ಬಲಿಯಾದ ಪ್ರತಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳುತ್ತಿದ್ದಾರೆ.