ವಿಜಯಸಾಕ್ಷಿ ಸುದ್ದಿ, ಗದಗ:
ದೇಶಭಕ್ತಿ ಗೀತೆ ವಂದೇ ಮಾತರಂ ಹಾಡುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಆಕಳಿಕೆಗಳು ಭರ್ಜರಿ ಕಾಡಿದವು. ಅಲ್ಲದೇ, ಕಾರ್ಯಕ್ರಮದಲ್ಲಿ ಡಿಕೆಶಿ ಅವರನ್ನು ನಿದ್ರಾದೇವತೆ ಆವರಿಸಿದ್ದಳು.
ರವಿವಾರ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಪ್ರಗತಿ ಪರಿಶೀಲನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸೇವಾದಳದ ಸದಸ್ಯರು ವಂದೇ ಮಾತರಂ ಗೀತೆ ಹಾಡುತ್ತಿದ್ದರು. ಈ ವೇಳೆ ಗೌರವಾರ್ಥವಾಗಿ ಎಲ್ಲರೂ ಎದ್ದು ನಿಂತಿದ್ದರು. ಶಾಸಕ ಎಚ್.ಕೆ.ಪಾಟೀಲ್ ಮತ್ತು ವಿಪ ಸದಸ್ಯ ಸಲೀಂ ಅಹ್ಮದ್ ಅವರ ಮಧ್ಯೆ ನಿಂತುಕೊಂಡಿದ್ದ ಡಿ.ಕೆ.ಶಿವಕುಮಾರ್ ಭರ್ಜರಿ ಆಕಳಿಕೆ ಹೊಡೆಯುವ ಮೂಲಕ ಒಂದೆ ಮಾತರಂ ಗೀತೆಗೆ ಡಿಕೆಶಿ ನಿರ್ಲಕ್ಷ್ಯ ತೋರಿದರು. ಇನ್ನು ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಡಿ.ಕೆ.ಶಿವಕುಮಾರ್ ನಿದ್ದೆಗೆ ಜಾರಿದರು.