ವಿಜಯೇಂದ್ರನ ಕೈಯಿಂದ ಅಧಿಕಾರ ಡಿಸಿಗಳಿಗೆ ಹೋಗಲಿ!

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

Advertisement

ಇನ್ನೂ 15 ದಿನ ಲಾಕ್ ಡೌನ್ ಮುಂದುವರೆಸಬೇಕು ಹಾಗೂ ಶ್ರಮಿಕ ವರ್ಗದವರಿಗೆ ತಲಾ ರೂ. 5 ಸಾವಿರ ಪರಿಹಾರ ಘೋಷಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಜಿಲ್ಲೆಗೆ ಹಿರಿಯ ಐಎಎಸ್ ಅಧಿಕಾರಿಯನ್ನು ಮಾನಿಟರ್ ಮಾಡಲು ನಿಯೋಜಿಸಬೇಕು. ಪ್ರತಿ ಜಿಲ್ಲೆಗೂ ರೂ. 100 ಕೋಟಿ ಅನುದಾನ ನೀಡಬೇಕು. ಜಿಲ್ಲಾಧಿಕಾರಿಗಳಿಗೆ ಹಣ ನೀಡಿ ಬಳಕೆಯ ಸ್ವತಂತ್ರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಒಂದು ದಿನವೂ ಹಳ್ಳಿಯತ್ತ ತೆರಳಿಲ್ಲ. ಟಾಸ್ಕ್ ಪೋರ್ಸ್ ನವರು ಕೂಡ ಹಳ್ಳಿಯತ್ತ ಮುಖ ಮಾಡುತ್ತಿಲ್ಲ. ಹಳ್ಳಿಯಲ್ಲಿ ಸಾಯುತ್ತಿರುವವರು ಶ್ರಮಿಕರು, ಅಹಿಂದ ವರ್ಗದವರೇ ಹೆಚ್ಚು. ಕೂಡಲೇ ಮಾಂಸದ ಅಂಗಡಿಗಳನ್ನು ಮುಚ್ಚಬೇಕು. ಮಾಂಸದ ಅಂಗಡಿಯ ಮುಂದೆ ಪ್ರತಿ ದಿನವೂ ಜಾತ್ರೆ ಇರುತ್ತದೆ ಎಂದು ಮನವಿ ಮಾಡಿದ್ದಾರೆ.

ಪ್ರತಿ ಹಣದ ಬಿಲ್ ಕೂಡ ವಿಜಯೇಂದ್ರನ ಕಡೆಯಿಂದ ಕ್ಲಿಯರ್ ಆಗಬೇಕು. ಹಣದ ಬಿಡುಗಡೆಯ ಕೇಂದ್ರೀಕರಣ ಮೊದಲು ತಪ್ಪಬೇಕು. ಡಿಸಿಗಳಿಗೆ ಹಣ ಖರ್ಚು ಮಾಡುವ ಅಧಿಕಾರ ನೀಡಬೇಕು. ಸರಕಾರ ನಡೆಸುವವರು ಹೆಣದ ಮೇಲೆ ಹಣ ಮಾಡಲು ಹೋಗಬೇಡಿ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here