ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ವಿದ್ಯುತ್ ಸ್ಪರ್ಷಿಸಿ ಓರ್ವ ಸಾವನ್ನಪ್ಪಿ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ, ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪೂರ ಬಳಿ ನಡೆದಿದೆ.
ಗಂಗಪ್ಪ ಲಮಾಣಿ(30) ಮೃತ ದುರ್ದೈವಿಯಾಗಿದ್ದು, ರಮೇಶ್ ಲಮಾಣಿ(29)ಗೆ ಗಂಭೀರ ಗಾಯಗಳಾಗಿವೆ. ಗಾಯಾಳು ರಮೇಶ್ ನನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೂಲಿ ಕೆಲಸ ಮಾಡಿ ಮನೆಗೆ ತೆರಳುವ ವೇಳೆ ಈ ಘಟನೆ ನಡೆದಿದ್ದು, ವಿದ್ಯುತ್ ಸ್ಪರ್ಷವಾದ ವೇಳೆ ಇವರಿಬ್ಬರೂ ಬೊಲೇರೋ ವಾಹನದ ಮೇಲ್ಭಾಗದಲ್ಲಿ ಕುಳಿತು ಹೋಗುತ್ತಿದ್ದರು. ಈ ವೇಳೆ ತೋಟಕ್ಕೆ ಹಾಕಿದ ವಿದ್ಯುತ್ ವೈರ್ ತಾಗಿ ಈ ದುರ್ಘಟನೆ ನಡೆದಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Trending Now



