HomeKarnataka Newsವೃದ್ಧರು, ಬುದ್ಧಿಮಾಂಧ್ಯರೇ ತುಂಬಿಕೊಂಡಿರುವ ಈ ಆಶ್ರಮದ ಎಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಗೊತ್ತಾ?

ವೃದ್ಧರು, ಬುದ್ಧಿಮಾಂಧ್ಯರೇ ತುಂಬಿಕೊಂಡಿರುವ ಈ ಆಶ್ರಮದ ಎಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಗೊತ್ತಾ?

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಮಂಗಳೂರು

ಜಿಲ್ಲೆಯಲ್ಲಿನ ಒಂದೇ ಆಶ್ರಮದ 210 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಹೆಚ್ಚಾಗುತ್ತಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಪಂ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದಲ್ಲಿರುವ ಸಿಯೋನ್ ಎಂಬ ಅನಾಥಾಶ್ರಮದಲ್ಲಿನ ಬರೋಬ್ಬರಿ 210 ಜನರಿಗೆ ಸೋಂಕು ಆವರಿಸಿದೆ.

ಈ ಆಶ್ರಮದಲ್ಲಿ 270 ಜನರಿದ್ದಾರೆ. ಆದರೆ, ಈ ಪೈಕಿ ಈಗಾಗಲೇ 210 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಆಶ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಾಮೂಹಿಕ ಪರೀಕ್ಷೆ ನಡೆಸಿದ್ದರು. ಈ ಸಂದರ್ಭದಲ್ಲಿ ಆಶ್ರಮದಲ್ಲಿನ ಬಹುತೇಕರು ಸೋಂಕಿಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ.

ಕೆಲವು ದಿನಗಳ ಹಿಂದೆ ಈ ಆಶ್ರಮದ ಕೆಲವು ವ್ಯಕ್ತಿಗಳಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು. ಹೀಗಾಗಿ ಆರೋಗ್ಯ ಅಧಿಕಾರಿಗಳು ಆಶ್ರಮದಲ್ಲಿನ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಿದ್ದರು. ಆದರೆ, ಬಹುತೇಕರಲ್ಲಿ ಸೋಂಕು ಇರುವುದು ಖಚಿತವಾಗಿದೆ.

ಈ ಆಶ್ರಮದಲ್ಲಿ ವೃದ್ಧರು ಮತ್ತು ಮನೋರೋಗಿಗಳೇ ಇದ್ದಾರೆ. ಸದ್ಯ ಅವರಿಗೆಲ್ಲ ಸೋಂಕು ಆವರಿಸಿದೆ. ಹೀಗಾಗಿ ಬೆಳ್ತಂಗಡಿ ಶಾಸಕ ಹರೀಶ್ ಅವರು ಇವರನ್ನೆಲ್ಲ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲು ಮುಂದಾಗಿದ್ದಾರೆ. ಹೀಗಾಗಿ 10ಕ್ಕೂ ಹೆಚ್ಚು ಆಂಬುಲೆನ್ಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಸೋಂಕಿತರು ಸದ್ಯ ಧರ್ಮಸ್ಥಳದ ರಜತಾದ್ರಿ ವಸತಿ ಗೃಹಕ್ಕೆ ಸ್ಥಳಾಂತರವಾಗಲಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!