ವಿಜಯಸಾಕ್ಷಿ ಸುದ್ದಿ, ಗದಗ
ಪತಿಗೆ ವೆಂಟಿಲೇಟರ್ ಬೆಡ್ ಸಿಗದ ಕಾರಣಕ್ಕೆ ಮಹಿಳೆಯೊಬ್ಬರು ಶಾಸಕ ಕಳಕಪ್ಪ ಬಂಡಿ ಎದುರು ಕಣ್ಣೀರಿಟ್ಟು ಗೋಳಾಡಿದ ಮನಕಲಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ರೋಣ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರು ಈ ಘಟನೆ ನಡೆದಿದೆ. ಪತಿಗೆ ವೆಂಟಿಲೇಟರ್ ಬೆಡ್ ಕೊಡಿಸಿ, ಜೀವ ಉಳಿಸುವಂತೆ ಪತ್ನಿ ಕಣ್ಣೀರು ಹಾಕಿದ್ದಾರೆ. ರೋಣ ತಾಲೂಕು ಆಸ್ಪತ್ರೆಗೆ ಶಾಸಕ ಕಳಕಪ್ಪ ಬಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಹಿಳೆ ಕಣ್ಣೀರು ಹಾಕಿದ್ದಾರೆ.
ವೆಂಟಿಲೇಟರ್ ಬೆಡ್ ಕೊಡಿಸುವಂತೆ ಕಣ್ಣೀರು ಹಾಕಿ, ಕೈಮುಗಿದು ಸೋಂಕಿತನ ಕುಟುಂಬಸ್ಥರು ಬೇಡಿಕೊಂಡಿದ್ದಾರೆ. ಸೋಂಕಿತ ತೀವ್ರ ಉಸಿರಾಟದಿಂದ ಬಳಲುತ್ತಿದ್ದಾರೆ. ಹೀಗಾಗಿ ವೆಂಟಿಲೇಟರ್ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದರು. ಆದರೆ, ಜಿಲ್ಲೆಯಲ್ಲಿ ವೆಂಟಿಲೇಟರ್ ಬೆಡ್ ಫುಲ್ ಆಗಿವೆ. ಅಲ್ಲದೇ, ಜಿಮ್ಸ್ ಆಸ್ಪತ್ರೆಯಲ್ಲಿಯೂ ವೆಂಟಿಲೇಟರ್ ಬೆಡ್ ಭರ್ತಿಯಾಗಿವೆ.

ಹೀಗಾಗಿ ವೆಂಟಿಲೇಟರ್ ಬೆಡ್ ಇಲ್ಲದೆ ಈ ಕುಟುಂಬ ಪರದಾಡುತ್ತಿತ್ತು. ವೆಂಟಿಲೇಟರ್ ಬೆಡ್ ಸಿಗದ ಕಾರಣಕ್ಕೆ ನಿನ್ನೆ ಮೂವರು ಸೋಂಕಿತರು ಸಾವನ್ನಪ್ಪಿದ್ದರು.