ಶನಿವಾರವೂ ಶನಿದೇವರ ಕಾಟ; ಗದಗ ಜಿಲ್ಲೆಯಲ್ಲಿ 459 ಜನರಿಗೆ ಸೋಂಕು, ಮತ್ತೆ ನಾಲ್ವರು ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಮೇ 15 ಶನಿವಾರವೂ ಪಾಸಿಟಿವ್ ಪ್ರಕರಣಗಳು ನಾಲ್ಕು ನೂರರ ಗಡಿ ದಾಟಿದೆ. ಸೋಂಕು ಹಳ್ಳಿ ಹಳ್ಳಿಗೂ‌ ವ್ಯಾಪಿಸುತ್ತದೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಜನ‌ ಆತಂಕದಿಂದ ಕಾಲ ಕಳೆಯುವಂತಾಗಿದೆ.

ಇವತ್ತಿನ ವರದಿಯಂತೆ ಮತ್ತೆ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ.

ಇಂದಿನ 459 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 17359ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -197, ಮುಂಡರಗಿ-77, ನರಗುಂದ-21, ರೋಣ-117, ಶಿರಹಟ್ಟಿ-36 ಹೊರಜಿಲ್ಲೆಯ-11 ಸೇರಿದಂತೆ 459 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 179 ಕ್ಕೇರಿದೆ.

ಧಾರವಾಡ ಜಿಲ್ಲೆಯ ನವಲಗುಂದ ನಿವಾಸಿ 60 ವರ್ಷದ ಮಹಿಳೆ ಮೇ 04 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು, ಮೇ 12 ರಂದು ಮೃತಪಟ್ಟಿರುತ್ತಾರೆ.

ಗದಗನ 42 ವರ್ಷದ ಮಹಿಳೆ ಮೇ 10 ರಂದು ಜಿಮ್ಸ್ ಗೆ ದಾಖಲಾಗಿದ್ದು, ಕೋವಿಡ್ ದೃಢಪಟ್ಟಿತ್ತು, ಮೇ 12 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

58 ವರ್ಷದ ಮಹಿಳೆ ಮೇ 09 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಮೇ 12 ರಂದು ಮೃತಪಟ್ಟಿದ್ದಾರೆ.

ಶಿರಹಟ್ಟಿ ತಾಲೂಕಿನ ಆದ್ರಹಳ್ಳಿ ಗ್ರಾಮದ ನಿವಾಸಿ 64 ವರ್ಷದ ಮಹಿಳೆ ಮೇ 04 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 13 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು 273 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 14769 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 2411 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 195 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here