ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ:
Advertisement
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮವಾಗಿ ಅಪಾರ ಪ್ರಮಾಣದ ಕಬ್ಬಿನ ಬೆಳೆ ನಾಶವಾಗಿರುವ ಘಟನೆ ಭಾನುವಾರ ತೆಗ್ಗಿನಭಾವನೂರಿನಲ್ಲಿ ನಡೆದಿದೆ.
ತಾಲೂಕಿನ ತೆಗ್ಗಿನ ಭಾವನೂರ ಗ್ರಾಮದ ಚಾಂದಸಾಬ ಕಮ್ಮಾರ ಎಂಬ ರೈತರಿಗೆ ಸೇರಿದ ಜಮೀನಿನಲ್ಲಿ ಸೋಂಪಾಗಿ ಬೆಳೆದಿದ್ದ ಕಬ್ಬು ಬೆಂಕಿಯ ಕೆನ್ನಾಲಿಗೆ ಸುಟ್ಟು ಭಸ್ಮವಾಗಿದೆ.

ಚಾಂದಸಾಬ ಕಮ್ಮಾರ ಅವರು ಐದು ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ಆಳೆತ್ತರಕ್ಕೆ ಬೆಳೆದಿದ್ದ ಕಬ್ಬು ಅದಾಗಲೇ ಕಟಾವು ಹಂತಕ್ಕೆ ಬಂದಿತ್ತು. ಆದರೆ, ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿಗೆ ತುತ್ತಾಗಿದೆ. ರೈತನ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಿದರಾದರೂ ಅದಾಗಲೇ ಕಬ್ಬು ಬೆಂಕಿಗೆ ಆಹುತಿಯಾಗಿತ್ತು.
