ವಿಜಯಸಾಕ್ಷಿ ಸುದ್ದಿ, ದಾವಣಗೆರೆ
ರಾಜ್ಯದಲ್ಲಿ ಮಹಾಮಾರಿಯ ಅಬ್ಬರ ಜೋರಾಗಿದೆ. ನಿಯಂತ್ರಣಕ್ಕಾಗಿ ಸದ್ಯ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದ ಜನರಿಗೆ ತಕ್ಕ ಪಾಠ ಕಲಿಸಲಾಗುತ್ತಿದೆ. ಆದರೆ, ಇಲ್ಲೊಬ್ಬ ಬಿಜೆಪಿ ಶಾಸಕ ಮಾತ್ರ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.
ಜಗಳೂರು ಬಿಜೆಪಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಅವರೇ ನಿಯಮ ಗಾಳಿಗೆ ತೂರಿರುವ ವ್ಯಕ್ತಿ. ಇವರು ಲಾಕ್ ಡೌನ್ ನಿಂದಾಗಿ ದೇವಸ್ಥಾನಗಳು ಬಂದ್ ಆಗಿದ್ದರೂ ಬಾಗಿಲು ತೆಗೆಯಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬಸ್ಥರೊಂದಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಇವರ ವರ್ತನೆ ಕಂಡು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಜಿಲ್ಲೆಯ ಜಗಳೂರು ತಾಲೂಕಿನ ಮಾಡ್ರಳ್ಳಿ ಗ್ರಾಮದ ಚೌಡೇಶ್ವರಿ ದೇವಿಯ ದೇವಸ್ಥಾನದ ಬಾಗಿಲು ತೆರೆಯಿಸಿ ಶಾಸಕರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪತ್ನಿ ಇಂದಿರಾ ರಾಮಚಂದ್ರಪ್ಪ, ಪುತ್ರ ಅಜಯೇಂದ್ರ ಸಿಂಹ ಇದ್ದರು.