ವಿಜಯಸಾಕ್ಷಿ ಸುದ್ದಿ, ಗದಗ:
ಸಹಕಾರ ರಂಗದ ಭೀಷ್ಮ ದಿ.ಕೆ.ಎಚ್.ಪಾಟೀಲರ ಧರ್ಮಪತ್ನಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಎಚ್.ಕೆ.ಪಾಟೀಲರ ಮಾತೋಶ್ರೀಯವರಾದ ದಿ.ಪದ್ಮಾವತಿ ಕೆ. ಪಾಟೀಲರು ಸೋಮವಾರ ಸ್ವರ್ಗವಾಸಿಗಳಾಗಿದ್ದಾರೆ.
88 ವಸಂತಗಳ ತುಂಬುಜೀವನ ನಡೆಸಿದ ಪದ್ಮಾವತಿ ಅಮ್ಮನವರು ಕೆಲಕಾಲದಿಂದ ವಯೋಸಹಜ ತೊಂದರೆಗಳಿಂದ ಬಳಲುತ್ತಿದ್ದರು. ಮೃತರು ಪುತ್ರರಾದ ಎಚ್.ಕೆ.ಪಾಟೀಲ ಹಾಗೂ ಪಿ.ಕೆ.ಪಾಟೀಲ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಹುಲಕೋಟಿಯ ಮುಕ್ತಿಧಾಮದಲ್ಲಿ ಮಂಗಳವಾರ 2 ಗಂಟೆಗೆ ನೆರವೇರಲಿದೆ.
ಸಂತಾಪ: ಶಾಸಕ ಎಚ್.ಕೆ.ಪಾಟೀಲ್ ಅವರ ತಾಯಿ ಪದ್ಮಾವತಿ ಕೃಷ್ಣಗೌಡ ಪಾಟೀಲ ಅವರ ನಿಧನಕ್ಕೆ ಹಲವು ನಾಯಕರು ಶೋಕ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್.ಪಾಟೀಲ್ ಸಂತಾಪ ವ್ಯಕ್ತಪಡಿಸಿದ್ದು, ತಾಯಿ ಪದ್ಮಾವತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿ ದಯಪಾಲಿಸಲಿ ಎಂದಿದ್ದಾರೆ.