ಶಾಸಕ ಕುಮಟಳ್ಳಿಯನ್ನು ತರಾಟೆಗೆ ತೆಗೆದುಕೊಂಡ ನಿರಾಶ್ರಿತರು!

0
Spread the love

  • ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮಕ್ಕೆ ಭೇಡಿ ನೀಡಿದ್ದ ಶಾಸಕ ಕುಮಟಳ್ಳಿ

ವಿಜಯಸಾಕ್ಷಿ ಸುದ್ದಿ, ಚಿಕ್ಕೋಡಿ

Advertisement

ಪ್ರವಾಹ ಪೀಡಿತ ಪ್ರದೇಶದ ವೀಕ್ಷಣೆಗೆ ತೆರಳಿದ್ದ ಶಾಸಕ ಮಹೇಶ ಕುಮಟಳ್ಳಿ ಅವರನ್ನು ನಿರಾಶ್ರಿತರು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ಇಂದು ನಡೆದಿದೆ.

ನದಿ ಇಂಗಳಗಾವ ಗ್ರಾಮ ಕೃಷ್ಣಾ ನದಿಯ ಪ್ರವಾಹಕ್ಕೆ ಸಿಲುಕಿದ್ದರಿಂದ ಶಾಸಕ ಮಹೇಶ ಕುಮಟಳ್ಳಿ ಇಂದು ವೀಕ್ಷಣೆಗೆ ತೆರಳಿದ್ದರು.
ಈ ವೇಳೆ ಗ್ರಾಮಸ್ಥರು ಶಾಸಕರಿಗೆ ಮುತ್ತಿಗೆ ಹಾಕಿ, ಮೊದಲು 2019ರ ಪೂರ್ಣ ಪರಿಹಾರ ನೀಡಿ. ಪ್ರವಾಹ ತಗ್ಗಿದ ಬಳಿಕ ಬಂದು ಮೊಸಳೆ ಕಣ್ಣೀರು ಒರೆಸುವುದನ್ನು ನಿಲ್ಲಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲು 2019ರ ಪರಿಹಾರ ನೀಡಿ ಮುಂದೆ ಹೋಗಿ ಎಂದು ಪಟ್ಟು ಹಿಡಿದಿದ್ದರಿಂದ ಶಾಸಕರು ತೀವ್ರ ಮುಜುಗರಕ್ಕೆ ಒಳಗಾದರು. ಕೃಷ್ಣಾ ತೀರದ ನದಿ ಇಂಗಳಗಾವ ಗ್ರಾಮ 2019 ರಲ್ಲಿ ಪ್ರವಾಹದಲ್ಲಿ ಸಂಪೂರ್ಣ ಮುಳುಗಡೆಯಾಗಿ ಹಲವಾರು ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದರು.


Spread the love

LEAVE A REPLY

Please enter your comment!
Please enter your name here