ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲು?

0
Spread the love

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

Advertisement

ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರು ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊರೊನಾ ನಿಯಮ ಮುರಿದು ಹೋಮ- ಹವನ ನಡೆಸಿದ್ದಕ್ಕೆ ಅವರ ವಿರುದ್ಧ ತಹಸೀಲ್ದಾರ್ ಬಸನಗೌಡ ಕೋಟೂರು ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

ತಹಸೀಲ್ದಾರ್ ಅವರ ನಿರ್ಧಾರಕ್ಕೆ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವ ಕೊರೊನಾ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೋವಿಡ್ ಕೇರ್ ಸೆಂಟರ್ ಮುಂದೆಯೇ ತಾವು ಊಟ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಕೂಡಲೇ ತಹಸೀಲ್ದಾರ್ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ಬಸನಗೌಡ ಕೋಟೂರ ಹಾಗೂ ಸಿಪಿಐ ದೇವರಾಜ್ ವಿರುದ್ಧ ಶಾಸಕ ರೇಣುಕಾಚಾರ್ಯ ಗುಡುಗಿದ್ದಾರೆ. ನನ್ನ ಮೇಲೆ ಕೇಸ್ ಹಾಕಲಿ. ನನ್ನನ್ನು ಅರೆಸ್ಟ್ ಮಾಡಲಿ. ಇಂತಹ ಕೇಸ್ ಗಳನ್ನು ನಾನು ಬಹಳ ನೋಡಿದ್ದೇನೆ. ಎರಡು ಬಾರಿ ಜೈಲಿಗೆ ಹೋಗಿ ಬಂದಿದ್ದೇನೆ. ಮುಂದೆ ಏನಾಗುತ್ತದೆ ನೋಡುತ್ತೇನೆ. ಅವರು ಎಲ್ಲಿಗೆ ಬೇಕಾದರೂ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.-


Spread the love

LEAVE A REPLY

Please enter your comment!
Please enter your name here