HomeGadag Newsಜಯ ಮೃತ್ಯುಂಜಯ ಸ್ವಾಮೀಜಿಗಳ ಭೇಟಿ: ಪಂಚಮಸಾಲಿ 2ಎ ಹೋರಾಟಕ್ಕೆ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಬೆಂಬಲ

ಜಯ ಮೃತ್ಯುಂಜಯ ಸ್ವಾಮೀಜಿಗಳ ಭೇಟಿ: ಪಂಚಮಸಾಲಿ 2ಎ ಹೋರಾಟಕ್ಕೆ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಬೆಂಬಲ

Spread the love

2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯ

ವಿಜಯಸಾಕ್ಷಿ ಸುದ್ದಿ, ಗದಗ

ವೀರಶೈವ ಲಿಂಗಾಯತ ಸಮಾಜದ ವಿವಿಧ ಉಪ ಪಂಗಡಗಳಿಗೆ 2ಎ ಮೀಸಲಾತಿ ಕಲ್ಪಿಸುವಂತೆ ಇಂದಿನ ಕೈಗಾರಿಕೆ ಸಚಿವರಾಗಿರುವ ಜಗದೀಶ್ ಶೆಟ್ಟರ್ ಅವರು ಅಂದು ಸಿಎಂ ಆಗಿದ್ದಾಗ ಸಿ.ಎಂ. ಉದಾಸಿಯವರ ನೇತೃತ್ವದ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ವರದಿ ಆಧರಿಸಿ ಪಂಚಮಸಾಲಿ ಸಮುದಾಯಕ್ಕೆ ಶೀಘ್ರವೇ 2ಎ ಮೀಸಲಾತಿ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿ ಕೊಡಬೇಕು ಎಂದು ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ ಒತ್ತಾಯಿಸಿದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಶ್ರೀಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಪಂಚಮಸಾಲಿ ಸಮಾಜದ ಮುಖಂಡ ಸಿದ್ದು ಪಲ್ಲೇದ ಅವರ ನೇತೃತ್ವದಲ್ಲಿ ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ ಸೇರಿದಂತೆ ಹಲವು ಮುಖಂಡರು ರವಿವಾರ ತುಮಕೂರು ಜಿಲ್ಲೆಯ ಶಿರಾ ಬಳಿ ಶ್ರೀಗಳನ್ನು ಭೇಟಿಯಾಗಿ ಹೋರಾಟಕ್ಕೆ ಬೆಂಬಲ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಇದುವರೆಗೂ ಪಂಚಮಸಾಲಿ ಸಮುದಾಯ ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗ ಶೈಕ್ಷಣಿಕವಾಗಿ ತೀರಾ ಹಿಂದುಳಿದೆ. ಈ ನಿಟ್ಟಿನಲ್ಲಿ ಹಲವು ದಿನಗಳಿಂದ ಶ್ರೀಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿರುವುದು ಸ್ವಾಗತಾರ್ಹವಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಶೀಘ್ರವೇ ಮುಖ್ಯಮಂತ್ರಿಗಳು
ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

೨ಎ ಮೀಸಲಾತಿಗಾಗಿ ನಡೆಯುತ್ತಿರುವ ಪಾದಯಾತ್ರೆ ಯೋಗ್ಯವಾಗಿದ್ದು, ಹೋರಾಟಕ್ಕೆ ಜಯ ಸಿಗಲಿ ಎಂದು ಆಶಿಸಿದರಲ್ಲದೇ, ಬಸವಜಯ ಮೃತ್ಯುಂಜಯ ಸ್ವಾಮೀಜಿಯವರ ಜೊತೆ ಮುಂದಿನ ಹೋರಾಟಗಳ ರೂಪರೇಷೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಅನಿಲ್ ಮೆಣಸಿನಕಾಯಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಅನಿಲ್ ಅಬ್ಬಿಗೇರಿ, ದಾವಣಗೇರಿಯ ಎ.ಸಿ.ಶಂಬಣ್ಣ, ಅನಿಲ್ ಪಾಟೀಲ್ (ಮಲಸಮುದ್ರ), ಕೆ.ವಿ.ಗದುಗಿನ, ಅಯ್ಯಪ್ಪ ಅಂಗಡಿ, ಶರಣಪ್ಪ ಗೊಳಗೊಳಕಿ, ಶಿವರಾಜ್ ಶಿವನಗೌಡರ, ಬಸವರಾಜ್ ಗಡ್ಡೆಪ್ಪನವರ ಸೇರಿದಂತೆ ಸಮಾಜದ ಪ್ರಮುಖ ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!