HomeGadag Newsಸಂಕನೂರ ಪರ ಪದವೀಧರರ ಒಲವು

ಸಂಕನೂರ ಪರ ಪದವೀಧರರ ಒಲವು

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗಜೇಂದ್ರಗಡ
ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರವಾಗಿ ಪದವೀಧರರ ಒಲವಿದೆ. ಹೀಗಾಗಿ ಸಂಕನೂರ ಅವರ ಗೆಲುವು ಖಚಿತ ಎಂದು ಬಿಜೆಪಿ ಮುಖಂಡ ಅಂದಪ್ಪ ಸಂಕನೂರ ಹೇಳಿದರು.
ಪಶ್ಚಿಮ ಪದವೀಧರರ ಚುನಾವಣೆ ಹಿನ್ನಲೆಯಲ್ಲಿ ಸ್ಥಳೀಯ ಪದವೀಧರರ ಮನೆ,ಮನೆಗೆ ಹಾಗೂ ವಿವಿಧ ಕಾಲೇಜುಗಳಿಗೆ ಗುರುವಾರ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಪರವಾಗಿ ಮತಯಾಚಿಸಿ ಮಾತನಾಡಿದರು.
ಕಳೆದ ಬಾರಿ ಪಶ್ಚಿಮ ಪದವೀಧರರು ನೀಡಿದ ಅವಕಾಶ ಸದ್ಬಳಿಕೆ ಮಾಡಿಕೊಂಡು ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರ ಸಮಸ್ಯೆಗಳಿಗೆ ಹಾಗೂ ಪದವೀಧರರ ನೋವಿಗೆ ಸ್ಪಂದಿಸುವುದರ ಜೊತೆಗೆ ಬಹು ವರ್ಷಗಳ ಬೇಡಿಕೆಯಾಗಿದ್ದ ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಿಸಲು ಎಸ್.ವಿ.ಸಂಕನೂರು ಅವರು ಶ್ರಮಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಸಂಕನೂರ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.
ಕರ್ನಾಟಕ ಜನಪರ ಸೇವಾ ಸಮಿತಿ ಅಧ್ಯಕ್ಷ ಗಣೇಶ ಗುಗಲೋತ್ತರ ಮಾತನಾಡಿ, ಸ್ಕಿಲ್ ಇಂಡಿಯಾ ಅಡಿಯಲ್ಲಿ 1300 ತರಬೇತಿ ಕೇಂದ್ರಗಳನ್ನು ಆರಂಭಿಸುವುದರ ಜೊತೆಗೆ ಸದನದಲ್ಲಿ ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಪದವೀಧರರ ನೋವಿಗೆ ಎಸ್.ವಿ.ಸಂಕನೂರ ಸ್ಪಂದಿಸಿದ್ದಾರೆ. ಅಲ್ಲದೆ ಜ್ಯೋತಿ ಸಂಜೀವಿನಿ ಯೋಜನೆಗನ್ನು ಖಾಸಗಿ ಶಿಕ್ಷಕರಿಗೆ ನೀಡಲು ಒತ್ತಾಯಿಸುವುದರ ಜೊತೆಗೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯನ್ನು ಜಾರಿಗೆ ತರಲು ಹಾಗೂ ಭೋದಕೇತರ ವರ್ಗಗಳ ಸಮಸ್ಯೆಗಳಿಗೆ ಪರಿಹಾರದ ಜೊತೆಗೆ ಎಲ್ಲ ಇಲಾಖೆಯ ಪದವೀಧರರಿಗೆ ಮೂಲಕ ಸೌಲಭ್ಯ ಒದಗಿಸಲು ಸಂಕನೂರು ಅವರು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದಾರೆ. ಹೀಗಾಗಿ ಮತ್ತೊಮ್ಮೆ ಪದವೀಧರರು ತಮ್ಮ ಮೊದಲ ಪ್ರಾಶಸ್ತ್ಯದ ಮತವನ್ನು ಸಂಕನೂರ ಅವರಿಗೆ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಶರಣಪ್ಪ ರೇವಡಿ, ಅಮರೇಶ ಗಾಣಗೇರ, ಬಸಯ್ಯ ಹಿರೇಮಠ, ವಸಂತರಾವ್ ಗಾರಗಿ, ಅಮರೇಶ ಅಂಗಡಿ, ಅನೀಲ ಮಹೇಂದ್ರಕರ, ವಿನಾಯಕ ಜಾಧವ ಇತರರು ಇದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!