ವಿಜಯಸಾಕ್ಷಿ ಸುದ್ದಿ, ನರಗುಂದ;
ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಸಂಜೀವಿನಿ ಮಹಿಳಾ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಾಗಾರಕ್ಕೆ ಗ್ರಾ.ಪಂ.ಅಧ್ಯಕ್ಷ ಮುತ್ತು ರಾಯರಡ್ಡಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿಮಾತನಾಡಿದ ಮುತ್ತು ರಾಯರಡ್ಡಿ, ಚಿಕ್ಕನರಗುಂದ ಗ್ರಾಮದಲ್ಲಿ ಮಹಿಳಾ ಒಕ್ಕೂಟಗಳು ಹಲವಾರು ವರ್ಷಗಳಿಂದ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತರುವುದು ಖುಷಿಯ ವಿಷಯ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಹಲಾವಾರು ಯೋಜನೆಗಳು ಇದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿ ಆದಷ್ಟೂ ಬೇಗ ಗ್ರಾಪಂ. ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ, ಕಸ ವಿಲೇವಾರಿಗೆ ವಾಹನ ಖರೀದಿ ಮಾಡಲಾಗುವದು. ಆ ಘಟಕದ ನಿರ್ವಹಣೆಯನ್ನು, ಸ್ವ ಸಹಾಯ ಸಂಘದ ಸದಸ್ಯರಿಗೆ ಹಸ್ತಾಂತರಿಸಲಾಗುವದು ಎಂದರು.

ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಯೋಜನೆಯ ಮಾಹಿತಿ ಇರುವ ಬಿತ್ತಿ ಪತ್ರಗಳನ್ನು ಸ್ವಸಹಾಯ ಸಂಘದ ಸದಸ್ಯರಿಗೆ ವಿತರಿಸಲಾಯಿತು.

ಮುಖ್ಯ ಅತಿಥಿಗಳಾದ ಜಿಲ್ಲಾ ವ್ಯವಸ್ಥಾಪಕ ಬಸವರಾಜ್ ಮೂಲಿಮನಿ ಮಾತನಾಡಿ, 2015 ರಿಂದ ಮಹಿಳಾ ಒಕ್ಕೂಟಗಳನ್ನು ರಚನೆ ಮಾಡಿ, ಈ ಒಕ್ಕೂಟಗಳು ಸುಸ್ಥಿರವಾಗಿ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಲು ಇಂತಹ ತರಬೇತಿಗಳು ಅವಶ್ಯಕವಾಗಿದೆ, ಈ ಸಂಜೀವಿನಿ ಯೋಜನಾಂಶ ಅವಶ್ಯ ಇರುವ ತರಬೇತಿಗಳನ್ನು ಸ್ವ,ಸಹಾಯ ಸಂಘಗಳಿಗೆ ನೀಡುವುದರ ಜೊತೆಗೆ ಸಾಲ ಸೌಲಭ್ಯ, ಜೀವನೋಪಾಯ ಮಾಡಲು ಮಾರ್ಗದರ್ಶನ ನೀಡಲಾಗುವದು ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಮಲ್ಲವ್ವ ಮರಿಯಣ್ಣವರ, ಸದಸ್ಯರಾದ ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಬಾಪು ಹಿರೇಗೌಡ್ರ, ಶರಣಬಸಪ್ಪ ಹಳೇಮನಿ, ಲಕ್ಷ್ಮಣ ಕಂಬಳಿ, ಈರಮ್ಮ ಮುದಿಗೌಡ್ರ, ಶೃತಿ ಬ್ಯಾಳಿ, ಶೋಭಾ ಕೋಣನ್ನವರ, ಶಂಕ್ರಮ್ಮ ಚಲವಾದಿ, ಪಿಡಿಓ ಶೈನಾಜ್ ಮುಜಾವರ್, ಕಾರ್ಯದರ್ಶಿ ಕೆಂಚಪ್ಪ, ಸಂಜೀವಿನಿ ವ್ಯವಸ್ಥಾಪಕ ಮೋಹನ್ ಕೃಷ್ಣ, ಮೇಲ್ವಿಚಾರಕ ಪ್ರಕಾಶ ಸೇರಿದಂತೆ ಹಲವಾರು ಮಹಿಳಾ ಸಂಘದ ಸದಸ್ಯರು ಗ್ರಾ.ಪಂ. ಸಿಬ್ಬಂದಿಗಳು ಇದ್ದರು.
