ವಿಜಯಸಾಕ್ಷಿ ಸುದ್ದಿ, ಕೊಪ್ಪಳ
Advertisement
ಅಂಜನಾದ್ರಿ ಬೆಟ್ಟ ಹನುಮ ಜನಿಸಿದ ತಾಣ ಎಂದೇ ಫೇಮಸ್. ಇದಕ್ಕೆ ಪುಷ್ಠಿ ನೀಡುವಂತೆ ಅಂಜನಾದ್ರಿ ಬೆಟ್ಟ ಹಾಗೂ ಸುತ್ತ ಮುತ್ತ ಸದಾ ವಾನರ ಸೇನೆ ಇದ್ದೇ ಇರುತ್ತೆ. ಮನುಷ್ಯರೊಂದಿಗೆ ಅವು ಸಹಜವಾಗಿ ಬೆರೆಯುತ್ತವೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಂತ್ರಿ ಅರವಿಂದ ಲಿಂಬಾವಳಿ ಶುಕ್ರವಾರ ಅಂಜನಾದ್ರಿ ಹಾಗೂ ಪಂಪಾ ಸರೋವರಕ್ಕೆ ಭೇಟಿ ನೀಡಿದ್ದರು. ಅರಣ್ಯ ಖಾತೆಯನ್ನೂ ಹೊಂದಿರುವ ಅರವಿಂದ ಲಿಂಬಾವಳಿಯವರು ಅಂಜನಾದ್ರಿಯಲ್ಲಿ ವಾನರ ಸೇನೆ ಕಂಡು, ಅವುಗಳೊಂದಿಗೆ ಪ್ರೀತಿಯಿಂದ ಕೆಲ ಕಾಲ ಕಳೆದರು. ಆಹಾರ, ಹಣ್ಣು ನೀಡಿ ಆರೈಕೆ ಮಾಡಿದರು. ಸಚಿವರ ಪ್ರೀತಿ-ಕಾಳಜಿಗೆ ಮನಸೋತ ವಾನರವೊಂದು ಅವರ ಹೆಗಲೇರಿ ಆಹಾರ ತಿಂದದ್ದು ವಿಶೇಷವಾಗಿತ್ತು.