ಸಚಿವ ಆನಂದ್ ಸಿಂಗ್ ಸಚಿವ, ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ?

0
Spread the love

  • ಹೊಸಪೇಟೆ ರಾಣಿಪೇಟೆಯಲ್ಲಿರುವ ಆನಂದ್‌ ಸಿಂಗ್‌ ಅವರ ಶಾಸಕರ ಕಚೇರಿಯ ನಾಮಫಲಕ ತೆರವು

ವಿಜಯಸಾಕ್ಷಿ ಸುದ್ದಿ, ಬೆಂಗಳೂರು 

Advertisement

ಖಾತೆ ಹಂಚಿಕೆ ಕುರಿತು ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಖಾತೆ ಬದಲಾವಣೆ ಮಾಡದಿದ್ದರೆ ಬುಧವಾರ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಚಿವ ಆನಂದ್ ಸಿಂಗ್ ನಿರ್ಧರಿಸಿದ್ದಾರೆ.

ತಮಗೆ ಹಂಚಿಕೆ ಮಾಡಿರುವ ಖಾತೆಯಿಂದ ಅಸಂತುಷ್ಟಗೊಂಡಿರುವ ಆನಂದ ಸಿಂಗ್ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಖಾತೆ ಬದಲಾವಣೆ ಮಾಡಲು ಗಡುವನ್ನೂ ನೀಡಿದ್ದಾರೆ. ಗಡುವಿನೊಳಗೆ ಖಾತೆ ಬದಲಾಗದಿದ್ದರೆ ನನ್ನ ರಾಜಿನಾಮೆ ಅಂಗೀಕರಿಸಿ ಎಂದು ಪತ್ರವನ್ನೂ ಕೊಟ್ಟು ಬಂದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಇದನ್ನೂ ಓದಿ ರಾಜೀನಾಮೆಗೆ ಮುಂದಾದ್ರಾ ಆನಂದಸಿಂಗ್ ?

ಮಂಗಳವಾರ ಸಂಜೆ ಹೊಸಪೆಟೆಯ ರಾಣಿಪೇಟೆಯಲ್ಲಿರುವ ಆನಂದ್‌ ಸಿಂಗ್‌ ಅವರ ಶಾಸಕರ ಕಚೇರಿಯ ನಾಮಫಲಕ ತೆರವುಗೊಳಿಸಲಾಗಿದೆ. ಬುಲ್ಡೋಜರ್ ಹಚ್ಚಿ ನಾಮಫಲಕ ತೆಗೆಯಲಾಗಿದೆ.

ಬುಧವಾರದಿಂದ ಇಲ್ಲಿ ಶಾಸಕರು ಲಭ್ಯವಿರುವುದಿಲ್ಲ. ಸಾರ್ವಜನಿಕರ ಅಹವಾಲು ಸ್ವೀಕರಿಸುವುದಿಲ್ಲ ಎಂದು ತಿಳಿಸಲಾಗಿದೆ ಎಂಬುದು ರಾಜೀನಾಮೆ ವದಂತಿಗೆ ಪುಷ್ಟಿ ನೀಡಿದೆ.

ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಸಚಿವ ಆನಂದ ಸಿಂಗ್ ನಿರಾಕರಿಸಿದ್ದಾರೆ. ನನ್ನ ತೀರ್ಮಾನ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ನಿಲುವಿನಿಂದ ಹಿಂದೆ ಸರಿಯಲಾರೆ ಎಂದು ತಿಳಿಸಿದ್ದಾರೆ.

ತಮ್ಮ ಖಾತೆ ಬದಲಾಗದಿದ್ದರೆ ಅಧಿಕಾರ ವಹಿಸಿಕೊಳ್ಳಲಾರೆ, ಸ್ವಾತಂತ್ರ್ಯೋತ್ಸವದ ದಿನ ಧ್ವಜಾರೋಹಣವನ್ನೂ ಮಾಡಲಾರೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here