ರಾಜ್ಯದ ಖ್ಯಾತ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ (Chandrashekhar Guruji ) ಅವರನ್ನು ಹುಬ್ಬಳ್ಳಿಯಲ್ಲಿ ಕೊಲೆ (Murder in Hubli) ಮಾಡಲಾಗಿದೆ, ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಹುಬ್ಬಳ್ಳಿಯ ಉಣಕಲ್ ನ ಖಾಸಗಿ ಹೋಟೆಲ್ ನಲ್ಲಿ ಹತ್ಯೆ ನಡೆದಿದೆ. ಹೋಟೆಲ್ reception ಬಳಿ ಕೊಲೆ ನಡೆದಿದೆ ಎಂದು ವರದಿಯಾಗಿದೆ. ಚಂದ್ರಶೇಖರ್ ಗುರೂಜಿ ಅವರ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಚಂದ್ರಶೇಖರ್ ಗುರೂಜಿ ಸರಳವಾಸ್ತು ಮೂಲಕ ಜನಪ್ರಿಯಗಳಿಸಿದವರು. ಚಂದ್ರಶೇಖರ್ ಅವರು ಭಾರತ ಮತ್ತು ವಿದೇಶಗಳಲ್ಲಿ ವಾಸ್ತು ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ಭಕ್ತರ ವೇಷ ಧರಿಸಿ ಬಂದು ಚಾಕುವಿನಿಂದ ಇರಿದಿದ್ದಾರೆ ಎಂದು ವರದಿಯಾಗಿದೆ. ಗುರೂಜಿ ಕೆಳಗೆ ಬೀಳುತ್ತಿದ್ದಾಗ ಮತ್ತೆ ಚಾಕುವಿನಿಂದ ಇರಿದು ಓಡಿಹೋಗಿದ್ದಾರೆ ಎನ್ನಲಾಗಿದೆ.
ಈ ಎಲ್ಲಾ ದೃಶ್ಯಗಳು ಹೋಟೆಲ್ನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಘಟನಾ ಸ್ಥಳಕ್ಕೆ ಶ್ವಾನದಳವನ್ನು ಕರೆತರಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕೊಲೆ
Advertisement