ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಹೈಕೋರ್ಟ್…ಒಂದೇ ದಿನದಲ್ಲಿ ವರದಿ ನೀಡುವಂತೆ ಲ್ಯಾಬ್ ಗಳಿಗೆ ಸೂಚಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಕೊರೊನಾ ವಿಷಯದಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಕೊರೊನಾ ಪರೀಕ್ಷೆ ಮಾಡಿಸಿ ಒಂದು ದಿನದೊಳಗೆ ವರದಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರವು ಎಲ್ಲಾ ಲ್ಯಾಬ್‌ ಗಳಿಗೆ 24 ಗಂಟೆಗಳಲ್ಲಿ ವರದಿ ನೀಡುವಂತೆ ಆದೇಶ ಹೊರಡಿಸಬೇಕು. ವರದಿ ನೀಡಲು ವಿಳಂಬ ಮಾಡಿದ ಲ್ಯಾಬ್ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಕೊರೊನಾ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಎ.ಎಸ್. ಓಕ ಮತ್ತು ನ್ಯಾ.ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಸಿಬ್ಬಂದಿ ಸಾವನ್ನಪ್ಪಿರುವ ಕುರಿತು ಪ್ರಸ್ತಾಪಿಸಿದ ಪೀಠ, ಸೋಂಕಿತ ಚಾಲಕ ಮೇ. 10ರಂದು ಸಿವಿ ರಾಮನ್ ಜನರಲ್ ಆಸ್ಪತ್ರೆಯಲ್ಲಿ ಆರ್‌ ಟಿಪಿಸಿಆರ್ ಪರೀಕ್ಷೆಗೆ ಸ್ವ್ಯಾಬ್ ಕೊಟ್ಟಿದ್ದರು. ಆದರೆ, ಮೇ 12ರ ವರೆಗೆ ಸೋಂಕಿತ ಸಾವನ್ನಪ್ಪುವವರೆಗೂ ವರದಿ ನೀಡಿಲ್ಲ ಎಂದು ಹೇಳಲಾಗಿದ್ದು, ಈ ಹಿಂದೆ ವಿಚಾರಣೆ ಸಂದರ್ಭದಲ್ಲಿ 24 ಗಂಟೆಗಳಲ್ಲಿ ಪರೀಕ್ಷಾ ವರದಿ ಲಭ್ಯವಾಗುವಂತೆ ಲ್ಯಾಬ್‌ ಗಳಿಗೆ ಸೂಕ್ತ ನಿರ್ದೇಶನ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಆದರೆ, ನ್ಯಾಯಾಲಯದ ಆದೇಶವೇ ಪಾಲನೆಯಾಗಿಲ್ಲ ಎಂದು ಪೀಠ ಬೇಸರ ವ್ಯಕ್ತಪಡಿಸಿದೆ.


Spread the love

LEAVE A REPLY

Please enter your comment!
Please enter your name here