ಸರ್ಕಾರವನ್ನೇ ಕೆಡವುವ ಶಕ್ತಿ ಇದ್ದವನು ಸಚಿವ ಸ್ಥಾನಕ್ಕೆ ಲಾಬಿ ಮಾಡುತ್ತೇನೆಯೇ?

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

Advertisement

ನಾನು ನೊಂದು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿಯ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಟ್ಟರು ನಾನೊಬ್ಬನೇ ಕೊಡುತ್ತೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು ನಾನೇಕೆ ಆ ಪಕ್ಷಕ್ಕೆ ಹೋಗಲಿ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನಾನು ಮುಂಬಯಿಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವಿಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನು ಹೇಳಿಕೊಂಡಿದ್ದೇನೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಕೆಲವು ಹಿರಿಯರ ಸಲಹೆ ಮೇರೆಗೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಬಹಿಸಿದ್ದೆ ಎಂದು ಹೇಳಿದ್ದಾರೆ.

ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ಬಿಟ್ಟು ಬಿಡಿ. ನಾನು ಅಲ್ಲಿಯವರೆಗೂ ಏನು ಮಾತಾಡಲ್ಲ. ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆಯು ಅವರ ನೇತೃತ್ವದಲ್ಲಿ ನಡೆಯಲಿದೆ. ನಾವು ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ.

ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ. ಹೀಗಿದ್ದರೂ ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡುತ್ತೇನೆಯೇ? ಎಂದು ಪ್ರಶ್ನಿಸಿದ ಅವರು, ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದಿದ್ದು ಅವರ ಮಾತೃ ಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೇನೆ. ಇಲ್ಲಿ ಯಾವ ರಾಜಕಾರಣವನ್ನು ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.
ಇನ್ನೊಬ್ಬರನ್ನು ಸಚಿವನನ್ನಾಗಿ ಮಾಡುವ ಶಕ್ತಿ ಇರುವ ನಾನು, ಸಚಿವನಾಗಲು ಲಾಬಿ ಮಾಡುವುದಿಲ್ಲ. ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ ಮಾಡಿದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ಬಂದಿದ್ದ ರಮೇಶ್ ಜಾರಕಿಹೊಳಿಗೆ ಸಹೋದರ ಲಕನ್ ಜಾರಕಿಹೊಳಿ ಸಾಥ್ ನೀಡಿದ್ದರು.


Spread the love

LEAVE A REPLY

Please enter your comment!
Please enter your name here