- ಸಿಂದಗಿಯ ಚಟ್ಟರಕಿ ಗ್ರಾಮದಲ್ಲಿ ಭಾವುಕರಾದ ಮಾಜಿ ಪ್ರಧಾನಿ ದೇವೇಗೌಡ
ವಿಜಯಸಾಕ್ಷಿ ಸುದ್ದಿ, ಸಿಂದಗಿ
ನಾನು ಎಷ್ಟು ದಿನ ಬದುಕುತ್ತೇನೊ ಗೊತ್ತಿಲ್ಲ. ನಾನು ಸತ್ತರೂ ಪ್ರಾದೇಶಿಕ ಪಕ್ಷ ಜೀವಂತ ಇರಬೇಕು. ನನ್ನ ಆಯುಸ್ಸು ಮುಗಿವುದೊರಳಗೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಸಿಂದಗಿಯ ಚಟ್ಟರಕಿ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಪರ ಮಾತಯಾಚಿಸಿ ಮಾತನಾಡಿದ ಅವರು, ನಿಮ್ಮಲ್ಲಿ ಮತಭಿಕ್ಷೆ ಬೇಡುತ್ತೇನೆ. ನನ್ನ ಕೊನೆಯ ಘಟ್ಟದಲ್ಲಿ ಕೇಳುತ್ತಿದ್ದೇನೆ. ಜೆಡಿಎಸ್ ಅಭ್ಯರ್ಥಿಗೆ ಆಶೀರ್ವಾದ ಮಾಡಿ. ಇನ್ನು ಎಷ್ಟು ದಿನ ಬದುಕುತ್ತೇನೋ ದೇವರು ಆಯುಷ್ಯ ಕೊಡಬೇಕಷ್ಟೆ ಎಂದು ಭಾವುಕರಾದರು.