ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು
Advertisement
ಗಡ್ಡಧಾರಿ ಸಿಎಂ ಆಗ್ತಾರೆ ಎಂಬ ಭವಿಷ್ಯ ನಿಜವಾದರೆ ಮುಂದೆ ಹಲವರು ಗಡ್ಡ ಬಿಡಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ.
ಏಳೆಂಟು ತಿಂಗಳು ಮಾತ್ರ ಬೊಮ್ಮಾಯಿ ಸಿಎಂ ಆಗಿರಲಿದ್ದಾರೆ. ಮುಂಬರುವ ಮಾರ್ಚ್ ವೇಳೆಗೆ ಕುಂಕುಮಧಾರಿ ಗಡ್ಡದಾರಿಯೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೂವಿನಹಡಗಲಿ ತಾಲೂಕು ಶ್ರೀ ಕ್ಷೇತ್ರ ಮೈಲಾರದ ಕಾರ್ಯದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿದ ಸಿ.ಟಿ.ರವಿ, ನಾನು ಸಿಎಂ ಆಗಬೇಕೆಂದು ಗಡ್ಡ ಬಿಟ್ಟಿಲ್ಲ. ಕಾಲೇಜು ದಿನಗಳಿಂದ ಗಡ್ಡ ಬಿಟ್ಟಿದ್ದೇನೆ. ಗಡ್ಡ ನನ್ನ ಐಡೆಂಟಿಟಿ. ಹಣೆಗೆ ಕುಂಕುಮ, ಕಿವಿಯಲ್ಲಿ ಮುರಾ, ಗಡ್ಡ ನನ್ನ ಗುರುತಿಸಲು ಸುಲಭ ಸಂಕೇತ ಹಾಗಾಗಿ ನಾನು ಮೊದಲಿನಿಂದಲೂ ಗಡ್ಡ ಬಿಟ್ಟಿದ್ದೇನೆ ಹೊರತು ಬೇರಾವ ಉದ್ದೇಶವಿಲ್ಲ ಎಂದರು.