HomeKarnataka Newsಸಿಎಂ ಬದಲಾವಣೆ ಕುರಿತು ಆನಂತರ ತಿಳಿಸುತ್ತೇನೆ – ಅರುಣ್ ಸಿಂಗ್!

ಸಿಎಂ ಬದಲಾವಣೆ ಕುರಿತು ಆನಂತರ ತಿಳಿಸುತ್ತೇನೆ – ಅರುಣ್ ಸಿಂಗ್!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಸಿಎಂ ಬದಲಾವಣೆ ಕುರಿತು ಮುಂದೆ ತಿಳಿಸುತ್ತೇನೆ ಎಂದು ಹೇಳುವ ಮೂಲಕ ಶಾಕ್ ನೀಡಿದ್ದಾರೆ. ಹೈ ಕಮಾಂಡ್ ನಿರ್ದೇಶನದ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

ಸಿಎಂ ಬದಲಾವಣೆ ಕುರಿತು ನನಗೆ ಎಷ್ಟು ತಿಳಿದಿದೆಯೋ ಅಷ್ಟನ್ನೂ ಹೇಳಿದ್ದೇನೆ. ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. ಈ ಬಗ್ಗೆ ಮುಂದೆ ಹೇಳುತ್ತೇನೆ ಎಂದು ಹೇಳಿದ್ದಾರೆ.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಜೀವವನ್ನು ಲೆಕ್ಕಿಸದೆ, ಸಾರ್ವಜನಿಕರ ಸೇವೆ ಮಾಡಿದ್ದಾರೆ. ಸೇವೆಯೇ ಸಂಘಟನೆ ಎಂಬ ಮನೋಭಾವದಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಸೇವೆ ಮಾಡುವುದು ನಮ್ಮ ಪರಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಜನರ ಸೇವೆ ಮಾಡುತ್ತಿಲ್ಲ. ಆದರೆ ಬಿಜೆಪಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಗಿಡ ನೆಡುವುದು, ಒನ್ ಟೈಪ್ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುವುದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದ್ದಾರೆ. ಅರುಣ್ ಸಿಂಗ್ ಸ್ವಾಗತಕ್ಕೆ ದೆಹಲಿ ವಿಶೇಷ ಪ್ರತಿನಿಧಿ ಶಂಕರ್ ಗೌಡ ಪಾಟೀಲ್ ಆಗಮಿಸಿದ್ದರು. ಅವರೊಂದಿಗೆ ನಾಯಕರು ಕೂಡ ಇದ್ದರು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡದ್ದಕ್ಕೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಸಹ ನಡೆಯಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!