HomeBellaryಸಿಎಂ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ ರೆಡ್ಡಿ ಬ್ರದರ್ಸ್!

ಸಿಎಂ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ ರೆಡ್ಡಿ ಬ್ರದರ್ಸ್!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಸದ್ಯ ಜೋರಾಗಿದೆ. ಹಲವರು ಸಿಎಂ ಪರ ಮಾತನಾಡುತ್ತಿದ್ದರೆ ಇನ್ನೂ ಹಲವರು ಸಿಎಂ ವಿರುದ್ಧ ಮಾತನಾಡುತ್ತಿದ್ದಾರೆ.
ಸದ್ಯ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ನಾಯಕತ್ವ ಬದಲಾವಣೆ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವುದು ಒಳ್ಳೆಯ ಬದಲಾವಣೆ ಅಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಬೇಕಾಗಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದ್ಯ ರಾಜ್ಯದ ಜನತೆ ಕೊರೊನಾ ಕಾಲದಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ರಾಜ್ಯದ ಅಭಿವೃದ್ಧಿ ಕಡೆ ಗಮನ ನೀಡಬೇಕು. ನನಗೂ ಬಳ್ಳಾರಿಯಲ್ಲಿ ಬಹಳ ಕೆಲಸ ಇವೆ. ಹೀಗಾಗಿ ನಾನು ಅರುಣ್ ಸಿಂಗ್ ಅವರ ಸಭೆಗೆ ಹೋಗುವುದಿಲ್ಲ. ನಾನು ಮೊದಲಿನಿಂದಲೂ ಯಡಿಯೂರಪ್ಪನವರ ಬೆಂಬಲಕ್ಕೆ ಇದ್ದೇನೆ. ನಾನು ಯಾವುದೇ ಸಚಿವ ಆಕಾಂಕ್ಷಿಯಲ್ಲ. ದೇವರು ಹಣೆ ಬರಹದಲ್ಲಿ ಬರೆದಿರುವುದೇ ನಡೆಯುತ್ತದೆ ಎಂದು ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಬದಲಾಯಿಸಬೇಕಿದೆ. ಶ್ರೀರಾಮುಲು ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಜೊತೆಗೆ ಡಿಸಿಎಂ ಮಾಡಬೇಕು. ಬಳ್ಳಾರಿ ವಿಭಜನೆಯಿಂದ ಜಿಲ್ಲೆಯ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಜಿಲ್ಲಾ ವಿಭಜನೆಯೇ ಕಾರಣ ಎಂದು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!