ವಿಜಯಸಾಕ್ಷಿ ಸುದ್ದಿ,
ಗದಗ: ತಾಲೂಕಿನ ಹಳ್ಳಿಕೇರಿ ಗ್ರಾಮದ ಹನುಮಂತಪ್ಪ ಸಿದ್ದಪ್ಪ ಕೋರಿ (22) ಎಂಬ ಕುರಿಗಾಹಿ ಸಿಡಿಲು ಬಡಿದು ಸಾವಿಗೀಡಾದ ಘಟನೆ ಶನಿವಾರ ಸಂಜೆ ವೆಂಕಟಾಪೂರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
Advertisement
ಬಿಸಿಲಿನ ಧಗೆಯಿಂದ ಬೇಸತ್ತಿದ್ದ ಜನರು, ಮಳೆಗಾಗಿ ಕಾಯುತ್ತಿದ್ದರು. ಕಳೆದ ಎರಡು ದಿನಗಳಿಂದ ಜಿಲ್ಲೆಯ ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇಂದು ಮಧ್ಯಾಹ್ನದಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದೆ.

ವೆಂಕಟಾಪೂರ ಗ್ರಾಮದ ಜಮೀನೊಂದರಲ್ಲಿ ಕುರಿಗಳನ್ನು ರಕ್ಷಿಸಲು ಹೋಗಿ ಹನುಮಂತಪ್ಪ ಕೋರಿ ಜೀವ ಕಳೆದುಕೊಂಡಿದ್ದಾನೆ. ಅಷ್ಟೇ ಅಲ್ದೇ ಮೂರು ಕುರಿಗಳು ಸಿಡಲಿಗೆ ಬಲಿಯಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ವಿಜಯಸಾಕ್ಷಿಗೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ಎಂ.ಎ.ನದಾಫ. ಉಪ ತಹಶಿಲ್ದಾರ ಸಿ.ಕೆ.ಬಳೂಟಗಿ. ಗ್ರಾಮಲೆಕ್ಕಾಧಿಕಾರಿ ಕು.ಸೌಮ್ಯ ಭೇಟಿ ಕೊಟ್ಟಿದ್ದರು.