ವಿಜಯಸಾಕ್ಷಿ ಸುದ್ದಿ, ಗದಗ
Advertisement
ಜಿಲ್ಲೆಯ ಹಲವಡೆ ಬಿರುಗಾಳಿ, ಗುಡುಗು ಸಿಡಿಲು ಸಮೇತ ಮಳೆಯಾಗಿದೆ. ಜಿಲ್ಲೆಯ ಗಜೇಂದ್ರಗಡ, ರೋಣ ಶಿರಹಟ್ಟಿ ತಾಲೂಕಿನ ಹಲವೆಡೆ ಬಿರುಗಾಳಿ ಮಳೆಯಾಗಿದೆ. ಅನೇಕ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಬಿಸಿಲುನಿಂದ ಬೆಂದ ಜನ್ರಿಗೆ ಮಳೆರಾಯ ತಂಪೆರೆಯುವಂತೆ ಮಾಡಿದ್ದಾನೆ.
ಇನ್ನೂ ಸಿಡಿಲು ಬಡಿದು ತೆಂಗಿನಮರ ಹೊತ್ತಿ ಉರಿದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಂಗಾ ನಗರದ ಮನೆ ಮುಂದಿನ ತೆಂಗಿನಮರ ಸಿಡಿಲಿನ ಬೆಂಕಿಗಾಹುತಿಯಾಗಿದೆ. ತೆಂಗಿನ ಮರದ ಸಿಡಿಲು, ಬೆಂಕಿ ಕಂಡು ಸ್ಥಳೀಯರು ಕೆಲಕಾಲ ಭಯಭೀತಗೊಂಡಿದ್ದರು.