ವಿಜಯಸಾಕ್ಷಿ ಸುದ್ದಿ, ಬೆಂಗಳೂರು
Advertisement
ಸಿಡಿ ಕೇಸ್ ಗೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ನೀಡಿದ್ದ ದೂರಿನ ವಿಚಾರಣೆ ಮುಕ್ತಾಯ ಭೀತಿ ಅನಗತ್ಯ ಎಂದು ನ್ಯಾಯಾಲಯ ಹೇಳಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪರ ವಕೀಲರು ಸಲ್ಲಿಸಿದ್ದ ಪಿಐ ಎಲ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಸಿಡಿ ಕೇಸ್ ಗೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ನೀಡಿದ್ದ ದೂರಿನ ವಿಚಾರಣೆ ಮುಕ್ತಾಯ ಭೀತಿ ಹಿನ್ನೆಲೆಯಲ್ಲಿ ಹಾಗೂ ಎಸ್ ಐಟಿ ತನಿಖೆ ಪ್ರಶ್ನಿಸಿ ಯುವತಿ ಹಾಗೂ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ದೂರಿನ ವಿಚಾರಣೆ ಮುಕ್ತಾಯ ಭೀತಿ ಅನಗತ್ಯ ಎಂದು ಅಭಿಪ್ರಾಯ ಪಟ್ಟಿದ್ದು, ವಿಚಾರಣೆ ಜುಲೈ 16ಕ್ಕೆ ಮುಂದೂಡಿದೆ.
ಯುವತಿ ಪರ ಖ್ಯಾತ ವಕೀಲೆ ಇಂದಿರಾ ಜೈಸಿಂಗ್ ವಾದ ಮಂಡಿಸಲಿದ್ದಾರೆ.