ಸಿಡಿ ಬಹಿರಂಗ ಪ್ರಕರಣ; ತನಿಖಾ ವರದಿ ಸಲ್ಲಿಸಲು ಹೈ ಸೂಚನೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಲಾಗಿದ್ದ ಎಸ್ಐಟಿ ವಿರುದ್ಧ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಆರೋಪಿ ಮನವಿ ಮೇರೆಗೆ ಎಸ್ಐಟಿ ರಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿಚಾರಣೆಗೂ ಮುನ್ನ ತನಿಖಾ ವರದಿ ಪರಿಶೀಲಿಸುವುದು ಅಗತ್ಯವಿದೆ. ಎಲ್ಲಾ ಎಫ್ಐಆರ್ ಗಳ ತನಿಖಾ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುವಂತೆ ಎಜಿ ಗೆ ನ್ಯಾಯಾಲಯ ಸೂಚಿಸಿದೆ.

ಜುಲೈ 19ರಂದು ಮುಚ್ಚಿದ ಲಕೋಟೆಯಲ್ಲಿ ತನಿಖೆ ಮುಕ್ತಾಯದ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 20ಕ್ಕೆ ಮುಂದೂಡಿದೆ ಎಂದು ಎಜಿ ಪ್ರಭುಲಿಂಗ ನಾವದಗಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here