ಸುಧಾಕರ್ ವಿರುದ್ಧ ಗುಡುಗಿದ ರೇಣುಕಾಚಾರ್ಯ!

0
Spread the love

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

Advertisement

ನೀವು ಉತ್ತಮ ಕೆಲಸಗಳನ್ನು ಮಾಡಿದ್ದರೆ ನಿಮ್ಮ ಜವಾಬ್ದಾರಿಗಳನ್ನು ಏಕೆ ಬೇರೆಯವರಿಗೆ ಹಂಚಿಕೆ ಮಾಡುತ್ತಿದ್ದಿವಿ ಎಂದು ಶಾಸಕ ರೇಣುಕಾಚಾರ್ಯ ಅವರು ಸಚಿವ ಸುಧಾಕರ್ ವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರುಗಳು ತಾವು ಕೆಲಸ ಮಾಡುತ್ತಿದ್ದೇವೋ ಅಥವಾ ಇಲ್ಲವೋ ಎಂಬುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾರಿಗೆ ಯಾವ ಜವಾಬ್ದಾರಿ ಇದೆ ಎಂದು ನಾವಾಗಲಿ ಅಥವಾ ಸಿಎಂ ಆಗಲಿ ಹೇಳುವುದಲ್ಲ. ಅವರೇ ಅರ್ಥ ಮಾಡಿಕೊಳ್ಳಬೇಕು ಎಂದು ತಮ್ಮ ಪಕ್ಷದ ಸಚಿವರ ವಿರುದ್ಧವೇ ಗುಡುಗಿದ್ದಾರೆ.

ಸಿಎಂ ಅವರು ಹಗಲು – ರಾತ್ರಿ ತಮ್ಮ ಇಳಿಯ ವಯಸ್ಸಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಸಚಿವರು ಸರ್ಕಾರ ಹಾಗೂ ಸಿಎಂ ಅವರಿಗೆ ಗೌರವ ಸಿಗುವಂತಹ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here