ಸೈಕಲ್ ಏರಿ ಜನರಲ್ಲಿ ಜಾಗೃತಿ ಮೂಡಿಸಿದ ಪಿಎಸ್ ಐ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಕೊರೊನಾ ಹಾವಳಿಯ ಹಿನ್ನೆಲೆಯಲ್ಲಿ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ. ಇಷ್ಟಿದ್ದರೂ ಜನ ಅನಾವಶ್ಯಕವಾಗಿ ಓಡಾಡುವುದನ್ನು ಬಿಡುತ್ತಿಲ್ಲ.
ಹೀಗಾಗಿ ಗಜೇಂದ್ರಗಡ ಪಿಎಸ್ ಐ ಅವರು ಸೈಕಲ್ ಮೇಲೆ ಏರಿ ಜಾಗೃತಿ ಮೂಡಿಸಿದ್ದಾರೆ.

ಪಿಎಸ್ ಐ ಗುರುಶಾಂತ ಅವರು ಗಜೇಂದ್ರಗಡ ಜನರಲ್ಲಿ ಜಾಗೃತಿ ಮೂಡಿಸಿದ ಅಧಿಕಾರಿ. ಸೈಕಲ್ ಏರಿ ಪಟ್ಟಣದ ತುಂಬೆಲ್ಲ ಸುತ್ತಾಡಿ ಜನರಲ್ಲಿ ಕೊರೊನಾ ಜಗೃತಿ ಮೂಡಿಸಿದ್ದಾರೆ. ಪಟ್ಟಣದ ದುರ್ಗಾ ವೃತ್ತ, ಅಬೇಡ್ಕರ್ ವೃತ್ತ, ಜೋಡು ರಸ್ತೆಯ ಹತ್ತಿರ ಸುತ್ತಾಡಿ ಜನರಲ್ಲಿ ಕೊರೊನಾ ಬಗ್ಗೆ ತಿಳುವಳಿಕೆ ಮೂಡಿಸಿದ್ದಾರೆ.

ಬೈಕ್ ಏರಿ ಬಂದವರನ್ನು ತಡೆದು ಈ ಸಂದರ್ಭದಲ್ಲಿ ಪಿಎಸ್ ಐ ಗುರುಶಾಂತ ಬುದ್ಧಿ ಹೇಳಿದ್ದಾರೆ. ಆದರೂ ಅನಗತ್ಯವಾಗಿ ಸುತ್ತಾಡಿದವರ ಚಳಿ ಕೂಡ ಬಿಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here