ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ
Advertisement
ಮಹಾಮಾರಿಗೆ ಬಲಿಯಾಗಿದ್ದ ತಾಯಿಯನ್ನು ಕೊನೆಯ ಬಾರಿ ನೋಡಲು ಬಂದಿದ್ದ ಮಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತಾಲೂಕಿನ ಹುರುಳಿನಂಜನಪುರ ಗ್ರಾಮದಲ್ಲಿ ನಡೆದಿದೆ. ಕೊಳ್ಳೇಗಾಲದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಅವರ ಅತ್ತೆ ಸರೋಜಮ್ಮ(76) ಮಹಾಮಾರಿಗೆ ಬಲಿಯಾಗಿದ್ದರು.
ಕೊನೆಯ ಬಾರಿಗೆ ತಾಯಿಯನ್ನು ನೋಡಲು ಬೆಂಗಳೂರಿನಿಂದ ಬಂದಿದ್ದ ಮಗ ಸುರೇಶ್ ಕುಮಾರ್ (53) ಕೂಡ ಅಂತ್ಯಕ್ರಿಯೆ ನಡೆಯುವ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ತಾಯಿ, ಮಗ ಇಬ್ಬರೂ ಒಂದೇ ದಿನ ಸಾವನ್ನಪ್ಪಿದ್ದು, ಕುಟುಂಬದ ನೀರವ ಮೌನಕ್ಕೆ ಕಾರಣವಾಗಿದೆ.