ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯಲ್ಲಿ ಸೋಂಕು ಮೊನ್ನೆಯಿಂದ ಇಳಿಮುಖವಾಗುತ್ತಿದೆ. ಭಾನುವಾರ ಜಿಲ್ಲೆಯ ಜನರಿಗೆ ಸಿಕ್ಕಿದ್ದ ಶುಭ ಸುದ್ದಿ ಸೋಮವಾರವೂ ಮುಂದುವರೆದಿದೆ. ನಿನ್ನೆ ಮೂನ್ನೂರರ ಗಡಿ ದಾಟಿದ್ದ ಸೋಂಕಿನ ಸಂಖ್ಯೆ, ಇವತ್ತು ಎರಡು ನೂರರ ಗಡಿ ದಾಟಿದೆ. ಸೋಂಕಿತರಕ್ಕಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರೇ ಹೆಚ್ಚು.
ಇಂದಿನ 277 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 21406 ಕ್ಕೆ ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -176, ಮುಂಡರಗಿ-11, ನರಗುಂದ-20, ರೋಣ-34, ಶಿರಹಟ್ಟಿ-34, ಹೊರಜಿಲ್ಲೆಯ-02 ಸೇರಿದಂತೆ 277 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 218 ಕ್ಕೇರಿದೆ.
ನರಗುಂದ ತಾಲೂಕಿನ ನಿವಾಸಿ
38 ವರ್ಷದ ವ್ಯಕ್ತಿ ಮೇ-19 ರಂದು ನರಗುಂದ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 19 ರಂದು ಮೃತಪಟ್ಟಿದ್ದಾರೆ.
ವಿಜಯಪುರ ಜಿಲ್ಲೆಯ ಕಂಬಾವಿ ನಿವಾಸಿ 46 ವರ್ಷದ ಮಹಿಳೆ ಮೇ -15 ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 20 ರಂದು ಮೃತಪಟ್ಟಿದ್ದಾರೆ.
ನರಗುಂದ ತಾಲೂಕಿನ ಕುರ್ಲಗೇರಿ ನಿವಾಸಿ 60 ವರ್ಷದ ವ್ಯಕ್ತಿ ಮೇ 23 ರಂದು ನರಗುಂದ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 23 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಕೂಡ ದಾಖಲೆಯ 430 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 17941 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 3247 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 195 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.