ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಕೊರೊನಾ ಸೋಂಕು ಹೆಚ್ಚಾಗಿರುವ ಗ್ರಾಮಾಂತರ ಪ್ರದೇಶದಲ್ಲಿ ಮೈಕ್ರೋ ಕಂಟೇನ್ಮೆಂಟ್ ವಲಯ ನಿರ್ಮಾಣ ಮಾಡುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಯತ್ನಿಸಲಾಗುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೈಕ್ರೋ ಕಂಟೇನ್ಮೆಂಟ್ ವಲಯ ಸ್ಥಾಪಿಸುವ ಜವಾಬ್ದಾರಿಯನ್ನು ಪಿಡಿಓ, ತಾಲೂಕು ಆರೋಗ್ಯ ಅಧಿಕಾರಿ ಮತ್ತು ಪೊಲೀಸರಿಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಸೋಂಕಿತರು ಯಾವ ಗ್ರಾಮದಲ್ಲಿ ಹೆಚ್ಚಿದ್ದಾರೋ ಆ ಗ್ರಾಮಗಳಲ್ಲಿ ಮೈಕ್ರೋ ಕಂಟೇನ್ಮೆಂಟ್ ಜೋನ್ ಗಳನ್ನು ನಿರ್ಮಿಸಲಾಗುವುದು. ಈ ಜೋನ್ಗಲಳಿಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ತಪಾಸಣೆ ನಡೆಸುವಂತೆ ವೈದ್ಯರಿಗೆ ಆದೇಶ ನೀಡಲಾಗಿದೆ. ಸೋಂಕಿತರಿಗೆ ವಿಟಮಿನ್-ಸಿ, ಜಿಂಕ್ ಸೇರಿದಂತೆ ಕೋವಿಡ್ ಗೆ ನೀಡಲಾಗುವ ಎಲ್ಲಾ ಔಷದೋಪಚಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕೋವಿಡ್ ಹೆಚ್ಚಾಗಿ ಕಾಣಿಸಿಕೊಂಡಿರುವ ರಾಜ್ಯದ ಆಯ್ದ ಕೆಲ ಗ್ರಾಮಪಂಚಾಯಿತಿಗಳ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುದುವಾರ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.