ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ
ಪಟ್ಟಣದಲ್ಲಿ ಬಸವ ಜಯಂತಿ ಪ್ರಯುಕ್ತ ಪಿಎಸ್ಐ ನವೀನ್ ಜಕ್ಕಲಿ, ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಊಟ ಕಲ್ಪಿಸುವುದರ ಮೂಲಕ ಬಡವರ ಹಸಿವನ್ನು ನೀಗಿಸುವ ಕೆಲಸವನ್ನು ಮಾಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಕಠಿಣ ಕರ್ಫ್ಯೂ ಕರ್ತವ್ಯದಲ್ಲೂ ಸಹ ಬಿಡುವು ಮಾಡಿಕೊಂಡು ಇಂತಹ ಮಾನವೀಯತೆಯನ್ನು ಮೆರೆಯುವಂತಹ ಹಲವಾರು ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರ ಮೂಲಕ ಸಾರ್ವಜನಿಕ ವಲಯದಲ್ಲಿ ಪಿಎಸ್ಐ ನವೀನ ಜಕ್ಕಲಿ ಪ್ರಸಂಸೆಗೆ ಪಾತ್ರರಾಗಿದ್ದಾರೆ.



