ಹಾಲಕೆರೆ ಅನ್ನದಾನೇಶ್ವರ ಸ್ವಾಮೀಜಿ ಲಿಂಗೈಕ್ಯೆ : ಶೋಕದಲ್ಲಿ ಭಕ್ತರು

0
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ:

Advertisement

ತಾಲೂಕಿನ ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನಮಠದ ಕಾಯಕಯೋಗಿ,‌ ತ್ರಿವಿಧ ದಾಸೋಹಿ ಡಾ.ಸಂಗನಬಸವ (ಅಭಿನವ ಅನ್ನದಾನೇಶ್ವರ) ಸ್ವಾಮೀಜಿ (85) ಅವರು ಇಂದು ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ.

ಸ್ವಾಮೀಜಿಗಳು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶ್ರೀಗಳ ಅಗಲಿಕೆಯಿಂದ ಅಪಾರ ಭಕ್ತ ಸಮೂಹ ಶೋಕ ಸಾಗರದಲ್ಲಿ ಮುಳುಗಿದೆ. ಇನ್ನು ಶ್ರೀಗಳ ಅಗಲಿಕೆಗೆ ಲೋಕಪಯೋಗಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹಾನಗಲ್ ಶಿವಯೋಗಿ ಮಂದಿರದ ಅಧ್ಯಕ್ಷರಾಗಿದ್ದ ಶ್ರೀ ಗಳು ಉತ್ತರ ಕರ್ನಾಟಕ ಭಾಗದ ಬಡ ವಿದ್ಯಾರ್ಥಿಗಳಿಗೆ ತ್ರಿವಿಧ ದಾಸೋಹದ ಮೂಲಕ ಬೆಳಕಾಗಿ ಶ್ರೀಗಳು ಶ್ರೀಮಠದಲ್ಲಿ ಇತ್ತೀಚೆಗೆ ‌ನಡೆದ ನ.8, 9 ಮತ್ತು 10 ರಂದು ಮೂರು ದಿನಗಳ ಕಾಲ ಅನ್ನದಾನೇಶ್ವರ ಶ್ರೀಗಳ ಗುರುವಂದನಾ ಹಾಗೂ ಮುಪ್ಪಿನ ಬಸವಲಿಂಗ ಸ್ವಾಮೀಜಿ‌ ಅವರ ಚರಪಟ್ಟಾಧಿಕಾರ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು.

ಇನ್ನು ಹಾಲಕೆರೆಯ ಡಾ.ಅಭಿನವ ಅನ್ನದಾನ ಸ್ವಾಮೀಜಿಗಳು ಲಿಂಗೈಕ್ಯರಾದ ಹಿನ್ನಲೆಯಲ್ಲಿ ನರೇಗಲ್ ಪಟ್ಟಣದ ವರ್ತಕರ ಸಂಘದಿಂದ ಸೋಮವಾರ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡುವ ಮೂಲಕ ಗೌರವ ಸೂಚಿಸುತ್ತಿದ್ದಾರೆ.

ಮಂಗಳವಾರ ಮಧ್ಯಾಹ್ನ 2 ಗಂಟೆಗೆ ವಿಧಿವಿಯ ಮೂಲಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಭಕ್ತರು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here