ಹಿರಿಯ ನಟ ರಾಜಾರಾಂ ಮಹಾಮಾರಿಗೆ ಬಲಿ?

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ರಾಜಾರಾಂ ಅವರು ಮಹಾಮಾರಿಗೆ ಬಲಿಯಾಗಿದ್ದಾರೆ.
ರಾಜಾರಾಂ (84) ಅವರು ಸಿನಿಮಾ, ಧಾರಾವಾಹಿ ಹಾಗೂ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ಇವರು ಸಿನಿಮಾಗಿಂತ ಹೆಚ್ಚಾಗಿ ರಂಗಭೂಮಿಯಲ್ಲಿಯೇ ಸಕ್ರೀಯರಾಗಿದ್ದರು.

ಕೊರೊನಾ ಸೋಂಕು ಧೃಡವಾಗಿತ್ತು ಎಂದು ತಿಳಿದು ಬಂದಿದೆ. ಆದರೆ, ಮನೆಯವರು ಮಾತ್ರ ಈ ಕುರಿತು ಬಹಿರಂಗ ಪಡಿಸಿಲ್ಲ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಇವರು 1971ರಿಂದ ಇಲ್ಲಿಯವರೆಗೆ 62 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿರಂಗದಲ್ಲಿ ರಾಜಕುಮಾರ್ ಸೇರಿದಂತೆ ಬಹುತೇಕ ಎಲ್ಲ ನಾಯಕರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ನೂರಾರು ನಾಟಕಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿದ್ದರು. ಸದ್ಯ ಇವರ ಸಾವಿಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

1971ರಲ್ಲಿ ಕೃಷ್ಣಸ್ವಾಮಿ ನಿರ್ದೇಶಕ ಪಾಪಪುಣ್ಯ ಸಿನಿಮಾ ರಾಜಾರಾಂ ಅವರ ಅಭಿನಯದ ಮೊದಲ ಸಿನಿಮಾವಾಗಿತ್ತು. ಸರೋಜಾ ದೇವಿ, ಕಲ್ಯಾಣ್ ಕುಮಾರ್ ಅಶ್ವತ್ಥ್ ಪ್ರಮುಖ ಪಾತ್ರದಲ್ಲಿದ್ದರು. ವಿಧಾನಸೌಧದಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡಿಕೊಂಡೇ ಸಿನಿಮಾ ಹಾಗೂ ರಂಗಭೂಮಿಯಲ್ಲಿ ಸಕ್ರಿಯವಾಗಿದ್ದರು ರಾಜಾರಾಂ.


Spread the love

LEAVE A REPLY

Please enter your comment!
Please enter your name here