ಹೊಸ ಮರಳು ನೀತಿ ಜಾರಿಗೆ!

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

Advertisement

ರಾಜ್ಯದಲ್ಲಿ ಮತ್ತೆ ಮರಳು ಮಾಫಿಯಾ ಸದ್ದು ಮಾಡುತ್ತಿದೆ. ಎಗ್ಗಿಲ್ಲದೆ ಮರಳು ಸಾಗಾಟವಾಗುತ್ತಿದೆ. ಉಳ್ಳವರು ಮರಳು ಮಾರಾಟ ಮಾಡಿ ಶ್ರೀಮಂತರಾಗುತ್ತಿದ್ದಾರೆ. ಇದರಿಂದ ಸ್ಥಳೀಯರಿಗೆ ಮರಳು ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಇನ್ನು ಮುಂದೆ ಬೈಕ್, ಎತ್ತಿನ ಗಾಡಿಯಲ್ಲಿ ಮರಳು ಸಾಗಿಸಿಕೊಳ್ಳಬಹುದು. ಸ್ಥಳೀಯರು, ರೈತರಿಗೆ ಮಾತ್ರ ಮರಳು ಸಾಗಾಟಕ್ಕೆ ಅವಕಾಶವಿದೆ. ತಮ್ಮ ಅಗತ್ಯಕ್ಕೆ ಮರಳು ಸಾಗಿಸಿಕೊಂಡರೆ ಕೇಸ್ ಹಾಕಲ್ಲ. ಮರಳು ಮಾಫಿಯ ತಡೆಯಲು ಶೀಘ್ರದಲ್ಲಿಯೇ ಕಠಿಣ ಮರಳು ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಕೋವಿಡ್ ನಿರ್ವಹಣೆಗಾಗಿ ಶೇ. 30ರಷ್ಟು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುದಾನ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here