ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ಹಳೆ ಊರಿನ ಕುರುಹಿನ ಶೆಟ್ಟಿ ಸಮಾಜದ ಶ್ರೀ ನೀಲಕಂಠೇಶ್ವರ ಸಮುದಾಯ ಭವನ ನಿರ್ಮಾಣಕ್ಕೆ ₹75 ಲಕ್ಷ ಅನುದಾನ ನೀಡುವುದಾಗಿ ಶಾಸಕ ಕೆ. ನೇಮಿರಾಜ್ ನಾಯ್ಕ್ ಘೋಷಿಸಿದರು.
ಮಂಗಳವಾರ ಸಮಾಜದ ಮುಖಂಡರು ಶಾಸಕರನ್ನು ಭೇಟಿ ಮಾಡಿ, ಸಮುದಾಯ ಭವನ ನಿರ್ಮಾಣಕ್ಕೆ ₹1 ಕೋಟಿ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಶಾಸಕರು, ಈಗಾಗಲೇ ವಿವಿಧ ಸಮಾಜಗಳ ಭವನಗಳಿಗೆ ಅನುದಾನ ನೀಡಲಾಗಿದ್ದು, ಕುರುಹಿನ ಶೆಟ್ಟಿ ಸಮಾಜಕ್ಕೂ ಇದೀಗ ₹75 ಲಕ್ಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಮಾಲವಿ ಮಲ್ಲಿಕಾರ್ಜುನ, ಉಪಾಧ್ಯಕ್ಷ ಸಮಗಂಡಿ ನಾಗರಾಜ, ಕಾರ್ಯದರ್ಶಿ ಹಿರಾಳು ವಾಸಣ್ಣ, ಖಜಾಂಚಿ ಮಾಚಾಲಿ ನಾರಾಯಣಪ್ಪ ಸೇರಿದಂತೆ ಸಮಾಜದ ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.



