ಕೊಪ್ಪಳ: ಲೋಕಾಯುಕ್ತ ದಾಳಿಯಲ್ಲಿ ಬಹಿರಂಗವಾದ ಭ್ರಷ್ಟಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಕೊಪ್ಪಳ ನಗರಸಭೆಯ ಜೂನಿಯರ್ ಎಂಜಿನಿಯರ್ (ಜೆಇ) ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ.
2023-24 ಹಾಗೂ 2024-25ನೇ ಸಾಲಿನ ವಿವಿಧ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿ ಅಕ್ರಮ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಒಟ್ಟು 366 ಕಾಮಗಾರಿಗಳಲ್ಲಿ ಸುಮಾರು 10 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿರುವುದು ಪತ್ತೆಯಾಗಿದೆ.
ಈ ಹಿಂದೆ ಲೋಕಾಯುಕ್ತ ದಾಳಿ ನಡೆಸಿದ ವೇಳೆ ಈ ಅಕ್ರಮಗಳ ಕುರಿತು ಮಾಹಿತಿ ಬಹಿರಂಗವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೌರಾಡಳಿತ ಇಲಾಖೆ, ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



