ಕೇರಳದ ವಯನಾಡ್ ನಲ್ಲಿ ಭೂಕುಸಿತ: 10 ಮಂದಿ ಸಾವು, ನೂರಾರು ಮಂದಿ ಸಿಲುಕಿರುವ ಶಂಕೆ

0
Spread the love

ಕೇರಳ: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದ ಪರಿಣಾಮ 10 ಮಂದಿ ಸಾವನ್ನಪ್ಪಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ಅಗ್ನಿಶಾಮಕ ಮತ್ತು ಎನ್ಡಿಆರ್‌ಎಫ್ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದ್ದು, ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆ ಎರಡನೇ ಬಾರಿ ಸಂಭವಿಸಿದೆ.

Advertisement

ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

 


Spread the love

LEAVE A REPLY

Please enter your comment!
Please enter your name here