12 ಸಾವಿರದ ಗಡಿಗೆ ಬಂದು ನಿಂತ ಸೋಂಕು!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು ರಾಜ್ಯದಲ್ಲಿ 11,958 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 340 ಜನ ಬಲಿಯಾಗಿದ್ದಾರೆ. ಸೋಂಕಿನ ಖಚಿತ ಪ್ರಮಾಣ ಶೇ.9.08ಕ್ಕೆ ಇಳಿಕೆಯಾಗಿದ್ದು, ಮರಣ ಪ್ರಮಾಣ ಶೇ. 2.84ಕ್ಕೆ ಇಳಿಕೆ ಕಂಡಿದೆ. ಅಲ್ಲದೇ, ಇಂದು ರಾಜ್ಯದಲ್ಲಿ 27,299 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 2,38,824 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 31,290 ಜನ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು 2,70,481 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಇಂದು ಎರಡು ಸಾವಿರಕ್ಕೂ ಕಡಿಮೆ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ನಗರದಲ್ಲಿ 1,992 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 199 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಇಂದು 5 ಜಿಲ್ಲೆಗಳಲ್ಲಿ ಕೊರೊನಾ ಪ್ರಕಣಗಳ ಸಂಖ್ಯೆ ಒಂದಂಕಿಗೆ ಇಳಿದಿದೆ. ಬೆಂಗಳೂರು, ಹಾಸನ ಮತ್ತು ಮೈಸೂರಿನಲ್ಲಿ ಅತ್ಯಧಿಕ ಪ್ರಕರಣಗಳು ವರದಿಯಾಗಿವೆ.
ಇಂದು ಬಾಗಲಕೋಟೆ 112, ಬಳ್ಳಾರಿ ,267 ಬೆಳಗಾವಿ 355, ಬೆಂಗಳೂರು ಗ್ರಾಮಾಂತರ 292, ಬೆಂಗಳೂರು ನಗರ 1,992, ಬೀದರ್ 13, ಚಾಮರಾಜನಗರ 209, ಚಿಕ್ಕಬಳ್ಳಾಪುರ 282, ಚಿಕ್ಕಮಗಳೂರು 365, ಚಿತ್ರದುರ್ಗ 294, ದಕ್ಷಿಣ ಕನ್ನಡ 408, ದಾವಣಗೆರೆ 380, ಧಾರವಾಡ 313, ಗದಗ 141, ಹಾಸನ 1,108, ಹಾವೇರಿ 179, ಕಲಬುರಗಿ 67, ಕೊಡಗು 230, ಕೋಲಾರ 298, ಕೊಪ್ಪಳ 155, ಮಂಡ್ಯ 597, ಮೈಸೂರು 1,213, ರಾಯಚೂರು 64, ರಾಮನಗರ 48, ಶಿವಮೊಗ್ಗ 1,224, ತುಮಕೂರು 420, ಉಡುಪಿ 394, ಉತ್ತರ ಕನ್ನಡ 364, ವಿಜಯಪುರ 137 ಮತ್ತು ಯಾದಗಿರಿಯಲ್ಲಿ 37 ಹೊಸ ಪ್ರಕರಣಗಳು ವರದಿಯಾಗಿವೆ.


Spread the love

LEAVE A REPLY

Please enter your comment!
Please enter your name here