ಡ್ರಿಂಕ್ಸ್ ಮಾಡಿದ್ದು ಗೊತ್ತಾದ್ರೆ ಅಪ್ಪ ಬೈತಾರೆಂದು 13ರ ಬಾಲಕ ಆತ್ಮಹತ್ಯೆ!

0
Spread the love

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಅಂತ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

13 ವರ್ಷದ ಶರಣ್ ಮೃತ ದುರ್ಧೈವಿಯಾಗಿದ್ದು,   ಶರಣ್ ಮೇಲ್ಪಾಲ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ನು ಎಂದು ತಿಳಿದು ಬಂದಿದೆ. ಮೇಲ್ಪಾಲ್ ಗ್ರಾಮದಲ್ಲಿ ಅದೇ ಗ್ರಾಮಸ್ಥರ ಮದುವೆ ಕಾರ್ಯಕ್ರಮವಿತ್ತು. ಮದುವೆಗೆ ಶರಣ್ ಸೇರಿ ಪೋಷಕರು ಹೋಗಿದ್ದರು. ಮದ್ವೆ ಮನೆಯಲ್ಲಿ ಶರಣ್ ಸ್ನೇಹಿತರ ಜೊತೆ ಸೇರಿ ಮದ್ಯ ಸೇವಿಸಿದ್ದಾನೆ.

ಮದ್ಯ ಸೇವಿಸಿದ ಬಳಿಕ ಕುಡಿದಿರುವುದು ಅಪ್ಪನಿಗೆ ಗೊತ್ತಾದರೆ ಬೈಯುತ್ತಾರೆ ಎಂದು ಮನೆ ಬಳಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನ ಗಮನಿಸಿದ ಪೋಷಕರು ಕೂಡಲೇ ಆತನನ್ನ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲೇ ಬಾಲಕ ಶರಣ್ ಮೃತಪಟ್ಟಿದ್ದಾನೆ. ಇನ್ನೂ ಈ ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here